ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಪತ್ರ

Date:

Advertisements
  • ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ
  • ’15ನೇ ಹಣಕಾಸು ಆಯೋಗದ ಶಿಫಾರಸ್ಸು ಕೇಂದ್ರ ಸರ್ಕಾರ ಪರಿಗಣಿಸಿಲ್ಲ’

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸುಮ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದ 2021-21ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಈವರೆಗೂ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

Advertisements

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

CM

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“2021-26 ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಫೆರಲ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನ ನೀಡಲು ಆದ್ಯತೆ ನೀಡಬೇಕು” ವಿನಂತಿಸಿಕೊಂಡಿದ್ದಾರೆ.

ತೆರಿಗೆ ಹಂಚಿಕೆ ಪಾಲು ಕಡಿಮೆ

“2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‌ಡಿಪಿ ಗಣನೀಯವಾಗಿ ಹೆಚ್ಚಳವಾಗಿದೆ. ಆದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೇ ಸಹಕಾರಿಯಾಗಿಲ್ಲ. 14 ನೇ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ. ಕಡಿಮೆ ಮಾಡಿದೆ” ಎಂದು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X