ತಮಿಳುನಾಡು | ಯುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟ

Date:

Advertisements
  • ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ
  • ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ದ ಘೋಷಣೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿರುವ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟಿಸುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ನಡುವೆ ಮಂಗಳವಾರ (ಏಪ್ರಿಲ್‌ 4) ಘರ್ಷಣೆ ಉಂಟಾಗಿದೆ.

ರಾಹುಲ್‌ ಗಾಂಧಿ ಅವರ ಲೋಕಸಭೆ ಅನರ್ಹತೆ ಖಂಡಿಸಿ ಪ್ರದೇಶದಲ್ಲಿ ಕಾಂಗ್ರೆಸ್‌ನ ರಾಜ್ಯ ಯುವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿದ ನಂತರ ದೇಶದೆಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ವರದಿಯಾಗುತ್ತಿವೆ. ರಾಜ್ಯದ ಕನ್ಯಾಕುಮಾರಿಯ ನಾಗರಕೋಯಿಲ್‌ ಪ್ರದೇಶದಲ್ಲಿ ಯುವ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ಉಂಟಾಗಿದೆ.

Advertisements

“ನಗರಕೋಯಿಲ್‌ನಲ್ಲಿ ಬಿಜೆಪಿ ಕಚೇರಿಯ ಹೊರಗೆ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರು. ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಧರ್ಮರಾಜ್‌ ಮತ್ತು ಇತರರು ನಮ್ಮ ಮೇಲೆ ದಾಳಿ ಮಾಡಿದ್ದಾರೆ” ಎಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ಬಿ ವಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಬಿಜೆಪಿಯ ಈ ಕೃತ್ಯವನ್ನು ನಾನು ಖಂಡಿಸುತ್ತೇನೆ. ಇಂತಹ ಬಿಜೆಪಿಯ ಗೂಂಡಾಗಳನ್ನು ನ್ಯಾಯದ ಮುಂದೆ ತರಲೇಬೇಕಿದೆ” ಎಂದು ಶ್ರೀನಿವಾಸ್‌ ಟ್ವೀಟ್‌ ಮಾಡಿದ್ದಾರೆ.

ಯುವ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿಯ ವಿಡಿಯೋವೊಂದನ್ನು ಶ್ರೀನಿವಾಸ್‌ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾಗರಕೋಯಿಲ್‌ನಲ್ಲಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಅಲ್ಲದೆ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಘಟನೆಯ ನಂತರ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಯುವ ಕಾಂಗ್ರೆಸ್‌ ವಿರುದ್ಧ ಪ್ರತಿಭಟಿಸಿದರು.

ತಮಗೆ ಎರಡು ವರ್ಷ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸಲ್ಲಿಸಿದ ಮೇಲ್ಮನವಿಯನ್ನು ಸೋಮವಾರ (ಏಪ್ರಿಲ್‌ 3) ಆಲಿಸಿ ಸೆಷನ್ಸ್‌ ನ್ಯಾಯಾಲಯ ರಾಹುಲ್‌ ಅವರಿಗೆ ಜಾಮೀನು ಮಂಜೂರು ಮಾಡಿತು.

2019ರ ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸೆಷನ್ಸ್‌ ನ್ಯಾಯಾಲಯ ಏಪ್ರಿಲ್‌ 13ಕ್ಕೆ ನಿಗದಿಪಡಿಸಿತು.

2019ರಲ್ಲಿ ಲೋಕಸಭೆ ಚುನಾವಣೆ ಸಂದರ್ಭ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ಸಮಾವೇಶದ ವೇಳೆ ರಾಹುಲ್‌ ಗಾಂಧಿ ಅವರು ಭಾಷಣದ ವೇಳೆ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದರು.

ಇದನ್ನು ಖಂಡಿಸಿ ಪೂರ್ಣೇಶ್‌ ಮೋದಿ ಎಂಬುವವರು ಸೂರತ್‌ ಸೆಷನ್ಸ್‌ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

ಮಾರ್ಚ್‌ 23ರಂದು ವಿಚಾರಣೆ ನಡೆಸಿದ್ದ ಸೆಷನ್ಸ್‌ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತು. ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X