ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಕೋಮು ಪ್ರಚೋದನೆ ಪೋಸ್ಟ್‌; ದೂರು ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದ್ದ ವಿಡಿಯೋ ತುಣುಕುಗಳನ್ನು ಬಳಿಸಿಕೊಂಡು, ಧಾರ್ಮಿಕ ಭಾವನೆ ಕೆರಳಿಸುವಂತೆ ತಿರುಚಿ ಟ್ವೀಟ್‌ ಮಾಡಿದ್ದ ಹಿಂದು ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಕೆಪಿಸಿಸಿ ವಕ್ತಾರ ಎಲ್ ಸೂರ್ಯ ಮುಕುಂದರಾಜ್‌ ದೂರು ನೀಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋವನ್ನು ಬಳಸಿಕೊಂಡು ಹಿಂದು ಮಹಾಸಭಾದ ಟ್ವಿಟರ್ ಖಾತೆಯಲ್ಲಿ ಮೇ 19ರಂದು ಪೋಸ್ಟ್‌ ಮಾಡಲಾಗಿದೆ. ಪೋಸ್ಟ್‌ನಲ್ಲಿ “ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರಚಿಸಿರುವ ಇಸ್ಲಾಮಿಕ್ ಸರ್ಕಾರದಲ್ಲಿ, ಮುಂದಿನ 5 ವರ್ಷಗಳಲ್ಲಿ ಜಿಹಾದ್ ಮತ್ತು ಮತಾಂತರ ಹೆಚ್ಚಾಗಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲಿನ ದಾಳಿಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತವೆ” ಎಂದು ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು...