ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ: ಸಚಿವ ಎಂ ಬಿ ಪಾಟೀಲ್

Date:

Advertisements
  • ರಾಜಗುರು ಫುಡ್ಸ್‌ನ ಮಾಲೀಕ ಕಿಶೋರ್ ಜೈನ್ ರಿಂದ ₹5 ಲಕ್ಷ, ಸರ್ಕಾರದಿಂದ ₹2 ಲಕ್ಷ ಪರಿಹಾರ
  • ಮೆಕ್ಕೆಜೋಳ ತುಂಬಿರುವ ಟ್ಯಾಂಕ್‌ನ ಸರಣಿ ಪಿಲ್ಲರ್‌ಗಳು ಕುಸಿದು ಬಿಹಾರದ ಏಳು ಕಾರ್ಮಿಕರ ಸಾವು

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದ ರಾಜ್ ಗುರು ಫುಡ್‌ನ ಮೆಕ್ಕೆಜೋಳ ತುಂಬಿರುವ ಟ್ಯಾಂಕ್ ನ ಸರಣಿ ಪಿಲ್ಲರ್‌ಗಳು ಕುಸಿದು ಬಿದ್ದು ಸಾವಿಗೀಡಾದ ಬಿಹಾರದ ಏಳು ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

”ರಾಜಗುರು ಫುಡ್ಸ್‌ನ ಮಾಲೀಕ ಕಿಶೋರ್ ಜೈನ್ ಅವರು ಸಾವಿಗೀಡಾದ ಕಾರ್ಮಿಕರಿಗೆ ತಲಾ ₹5 ಲಕ್ಷ ಪರಿಹಾರ ಕೊಡಲು ಒಪ್ಪಿದ್ದಾರೆ. ರಾಜ್ಯ ಸರ್ಕಾರ ತಲಾ ₹2 ಲಕ್ಷ ಪರಿಹಾರ ನೀಡಲಿದೆ” ಎಂದು ಸುದ್ದಿಗಾರರಿಗೆ ಹೇಳಿದರು.

“ಗಾಯಗೊಂಡಿರುವ ಒಬ್ಬ ಕಾರ್ಮಿಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ. ಅವರಿಗೆ ಸಹ ₹50 ಸಾವಿರ ಪರಿಹಾರ ನೀಡಲಾಗುವುದು” ಎಂದರು.

Advertisements

ವಿಮಾನದ ಮೂಲಕ ಮೃತ ದೇಹ ರವಾನೆ

”ಕಾರ್ಮಿಕರ ಶವಗಳನ್ನು ಸಮೀಪದ ಬೆಳಗಾವಿ ಅಥವಾ ಕುಲಬುರ್ಗಿ ವಿಮಾನ ನಿಲ್ದಾಣದಿಂದ ಬಿಹಾರ ರಾಜ್ಯದ ರಾಜಧಾನಿ ಪಟ್ನಾಕ್ಕೆ ವಿಮಾನದ ಮೂಲಕ (ಏರ್ ಲಿಫ್ಟ್) ಸಾಗಿಸಿ, ಕಾರ್ಮಿಕರ ಮನೆಗೆ ತಲುಪಿಸಲಾಗುವುದು” ಎಂದು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಮೃತ ಕಾರ್ಮಿಕರ ಸಂಖ್ಯೆ ಏಳಕ್ಕೇರಿಕೆ

ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಫುಡ್ಸ್ ಕಂಪನಿಯ ಮೆಕ್ಕೆಜೋಳ ಸಂಗ್ರಹಿಸಿಡುತ್ತಿದ್ದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಫುಡ್ ಪ್ರೊಸೆಸಿಂಗ್ ಯುನಿಟ್ ಯಂತ್ರ ಸಮೇತ 480 ಟನ್ ಮೆಕ್ಕೆಜೋಳದ ಮೂಟೆಗಳು ಬಿದ್ದಿವೆ. ಪರಿಣಾಮ ಎಂಟು ಮಂದಿ ಕಾರ್ಮಿಕರು ಅದರೊಳಗೆ ಸಿಲುಕಿಕೊಂಡು, ಜೀವನ್ಮರಣ ಹೋರಾಟ ನಡೆಸಿದ್ದರು. ಈ ಪೈಕಿ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ.

ಬಿಹಾರ ಮೂಲದ ಗುಲಾರ್​ ಚಂದ್ ​(50), ಕೃಷ್ಣಕುಮಾರ್ ​(22), ರಾಮ್​​ ಬಾಲಕ್​ (52), ಲುಖೋ ಜಾಧವ್(45), ರಾಜೇಶ್ ಮುಖಿಯಾ (25), ರಾಮ್ರೀಜ್ ಮುಖಿಯಾ(29), ಸಂಬೂ ಮುಖಿಯಾ (26) ಮೃತ ಕಾರ್ಮಿಕರು. ಘಟನೆಯಲ್ಲಿ ಕಾರ್ಮಿಕರಾದ ಸೋನು ಕರಾಮಚಂದ್, ರವೀಶ್ ಕುಮಾರ್, ಅನಿಲ್, ಕಲ್ಮೇಶ್ವರ್ ಮುಕಿಯ, ಕಿಶೋರ್ ಹಜಾರಿಮಲ್ ಜೈನ್, ಪ್ರಕಾಶ್ ಧುಮಗೊಂಡ ಎಂಬುವವರು ಗಾಯಗೊಂಡಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವ ಎಂ ಬಿ ಪಾಟೀಲ್ ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು. ಅಲ್ಲದೇ, ಘಟನಾ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ ಬಹಳ ಹೊತ್ತಿನವರೆಗೂ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.

ಘಟನೆಯಲ್ಲಿ ಒಟ್ಟು 50 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್, ಅಗ್ನಿಶಾಮಕ, ಪೊಲೀಸ್ ಹಾಗೂ ಜಿಲ್ಲಾಡಳಿತಕ್ಕೆ ಸಚಿವರು ಧನ್ಯವಾದ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X