ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

Date:

Advertisements
  • ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು
  • ಚುನಾವಣಾ ವೇಳೆ ಆಸ್ತಿ ಕುರಿತು ಅಪೂರ್ಣ ಮಾಹಿತಿಯ ಆರೋಪ

ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪದ ಮೇಲೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

“2004ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1, 2, 3, 4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ. ಹಾಗೆ ತನ್ನ ಚಿಕ್ಕಮ್ಮ ಸಾವಿತ್ರಮ್ಮರಿಂದ ದಾನ ಪಡೆದಿರುವುದಾಗಿಯೂ ಹೇಳಿದ್ದಾರೆ. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು?” ಎಂದು ಪ್ರಶ್ನಿಸಿದ್ದಾರೆ.

2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಪೂರ್ಣ ಪ್ರಮಾಣದ ಮಾಹಿತಿ ನೀಡದೇ ವಂಚಿಸಿದ್ದಾರೆ ಎಂದು ಸಿ ಎಸ್ ಸಿದ್ಧರಾಜು ಅವರು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆದಿರುವುದಾಗಿ ಹೇಳಿದ್ದಾರೆ. ಆದರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X