ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ; ಎಸ್‌ಪಿಗೆ ದೂರು ಸಲ್ಲಿಸಿದ ಶಾಸಕ ಬಿ ಆರ್‌ ಪಾಟೀಲ್‌

Date:

Advertisements

ನಕಲಿ ಪತ್ರದ ಕುರಿತು ಸಮಗ್ರ ತನಿಖೆ ನಡೆಸಿ ಸುಳ್ಳು ಸುದ್ದಿ ಸೃಷ್ಠಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕ ಬಿ ಆರ್ ಪಾಟೀಲ್ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಎಸ್‌ಪಿಗೆ ಸಲ್ಲಿಸಿದ ದೂರಿನಲ್ಲಿ, “ಶಾಸಕನಾದ ನನ್ನ ಹೆಸರಿನಲ್ಲಿ ಹಳೆ ಲೆಟರ್‌ ಹೆಡ್‌ ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ದ್ವೇಷ ಹುಟ್ಟಿಸಿ ಅದರ ರಾಜಕೀಯ ಲಾಭ ಪಡೆಯಲು ಕೆಲವರು ಹುನ್ನಾರ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಕಲಿ ಪತ್ರದಲ್ಲಿ ಸಹಿ ಮಾಡಿದ್ದು, ನನ್ನ ಹಸ್ತಾಕ್ಷರದ ಪ್ರತಿಯನ್ನು ಪೇಸ್ಟ್‌ ಮಾಡಿದ್ದಾರೆ. ಕಳೆದ ಬಾರಿ ನಾನು ಶಾಸಕನಾಗಿದ್ದಾಗ ಕಲಬುರಗಿ ಶಾಂತಿ ನಗರದಲ್ಲಿ ವಾಸವಿದ್ದೆ. ಅದೇ ವಿಳಾಸವಿರುವ ಲೆಟರ್‌ ಹೆಡ್‌ ಕಲರ್‌ ಜೆರಾಕ್ಸ್‌ ತೆಗೆದು ಸುದ್ದಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಈಗ ಬಳಸುವ ಲೆಟರ್‌ಹೆಡ್‌ನಲ್ಲಿ ಹೊಸ ವಿಳಾಸವಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

Advertisements

“ಜುಲೈ 24ರಂದು ಮುಖ್ಯಮಂತ್ರಿಗೆ ಪತ್ರ ನೀಡಿರುವುದಾಗಿ ದಿನಾಂಕ ನಮೂದಿಸಲಾಗಿದೆ. ಆದರೆ, ನಾನು ಜುಲೈ 23ರಂದು ಬೆಂಗಳೂರಿನಿಂದ ರಾತ್ರಿ ರೈಲಿನಲ್ಲಿ ಹೊರಟು ಜು. 24ರ ಬೆಳಗ್ಗೆ ಕಲಬುರಗಿಗೆ ತಲುಪಿರುತ್ತೆನೆ” ಎಂದು ತಿಳಿಸಿದ್ದಾರೆ.

“ಪತ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿದೆ ಎಂಬ ಆರೋಪ ಹೊರಿಸಿ ಈ ರೀತಿ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದು ತನಿಖೆ ಆಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ಬರಬೇಕು. ಅಂತವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಿಯಾಂಕ್‌ ಖರ್ಗೆ ಮತ್ತು ನನ್ನ ನಡುವೆ ಮನಸ್ಥಾಪ ಮೂಡಿಸಲು ನಕಲಿ ಪತ್ರ ಸೃಷ್ಟಿ: ಬಿ ಆರ್‌ ಪಾಟೀಲ್

ಬಿಜೆಪಿ ನಕಲಿ ಸೃಷ್ಟಿಯ ಮೊರೆ ಹೋಗಿದೆ

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ನಮ್ಮ ಸರ್ಕಾರವನ್ನು ವಿರೋಧಿಸಲು, ಆಪಾದಿಸಲು ಬಿಜೆಪಿಗೆ ಈಗ ವಾಸ್ತವ ವಿಷಯಗಳೇ ಇಲ್ಲದಾಗಿದೆ, ಹಾಗಾಗಿ ನಕಲಿ ಸೃಷ್ಟಿಯ ಮೊರೆ ಹೋಗಿದೆ. ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ತಯಾರಾದ ನಕಲಿ ಪತ್ರದ ಕುರಿತು ನಮ್ಮ ಶಾಸಕ ಬಿ ಆರ್ ಪಾಟೀಲ್ ಅವರು ಕಲಬುರಗಿ ಎಸ್‌ಪಿ ಅವರನ್ನು ಭೇಟಿಯಾಗಿ ನಕಲಿ ಪತ್ರದ ಕುರಿತು ಸಮಗ್ರ ತನಿಖೆಯಾಗಬೇಕೆಂದು ದೂರು ಸಲ್ಲಿಸಿದರು” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X