ಯುವಕ್ರಾಂತಿ ಸಮಾವೇಶ | ಪ್ರತಿ ತಿಂಗಳು ಯುವ ನಿಧಿ ಹೆಸರಲ್ಲಿ ನಿರುದ್ಯೋಗ ಭತ್ಯೆ ಘೋಷಿಸಿದ ಕಾಂಗ್ರೆಸ್‌

Date:

Advertisements
  • ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ. 10 ಲಕ್ಷ ಯುವಕರಿಗೆ ಉದ್ಯೋಗ
  • ಪದವೀಧರರಿಗೆ 3,000, ಡಿಪ್ಲಮೋ ಪದವೀಧರರಿಗೆ 1,500 ರೂ. ಭತ್ಯೆ: ರಾಹುಲ್‌ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲಮೋ ಪದವೀಧರರಿಗೆ 1,500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದರು.

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ಸೋಮವಾರ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೂಡಿ ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿ ಮಾತನಾಡಿದರು.

“ಕರ್ನಾಟಕದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಭಾರತ್‌ ಜೋಡೋ ಯಾತ್ರೆ ಸಮಯದಲ್ಲಿ ಯುವಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿದೆ. ಕೇವಲ ಯುವಕರು ಮಾತ್ರವಲ್ಲ ಎಲ್ಲ ವರ್ಗದ ಜನರು ಕೂಡ ರಾಜ್ಯ ಸರ್ಕಾರವನ್ನು ದೇಶದ ಅತ್ಯಂತ ಭ್ರಷ್ಟ ಸರ್ಕಾರ, 40% ಕಮಿಷನ್ ಸರ್ಕಾರ ಎಂದು ಕರೆಯುತ್ತಿದ್ದಾರೆ” ಎಂದರು.

Advertisements

“ಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ಪ್ರತಿ ಪಧವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1,500 ರೂ.ಗಳನ್ನು ಎರಡು ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ. ಇನ್ನು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಖಾಲಿ ಇರುವ 2.50 ಲಕ್ಷ ಉದ್ಯೋಗ ಭರ್ತಿ ಮಾಡಲಾಗುವುದು” ಎಂದು ಭರವಸೆ ವ್ಯಕ್ತಪಡಿಸಿದರು.

“ಯಾತ್ರೆ ಸಮಯದಲ್ಲಿ ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡಿದ್ದರು. ಅವರ ಕಷ್ಟಕ್ಕೆ ಪರಿಹಾರ ನೀಡಲು ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ” ಎಂದರು.

ರಾಜ್ಯ ಸರ್ಕಾರದ ಮೇಲೆ ಯುವಕರ ದೂರು

“ಗುತ್ತಿಗೆದಾರರ ಸಂಘ, ಶಾಲಾ ಸಂಸ್ಥೆಗಳು ಪ್ರಧಾನಿಗೆ ಪತ್ರ ಬರೆದು ಕರ್ನಾಟಕದಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರು ನೀಡಿದ್ದರೂ ಪ್ರಧಾನಮಂತ್ರಿಗಳು ಈವರೆಗೂ ಉತ್ತರ ನೀಡಿಲ್ಲ. ಮೈಸೂರು ಸ್ಯಾಂಡಲ್ ಸೋಪ್ ಕಾರ್ಪೊರೇಷನ್ ನಲ್ಲಿ ಹಗರಣ ನಡೆದು ಶಾಸಕನ ಪುತ್ರ ಸಿಕ್ಕಿಬಿದ್ದಾಗ 8 ಕೋಟಿ ಸಿಗುತ್ತದೆ. ಸರ್ಕಾರ ಅವರ ರಕ್ಷಣೆ ಮಾಡುತ್ತದೆ. ಪಿಎಸ್ಐ ನೇಮಕಾತಿ, ಸಹಾಯಕ ಪ್ರಾದ್ಯಾಪಕ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಎಲ್ಲ ಆರೋಪ ಲಕ್ಷಾಂತರ ಯುವಕರ ದೂರಾಗಿದೆ” ಎಂದರು.

“ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಿ ಪ್ರಚಂಡ ಜಯಗಳಿಸಿ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಡಬೇಕು. ರಾಜ್ಯ ಚುನಾವಣೆ ಸಮಯದಲ್ಲಿ ನೀವು ಯಾವ ಜಿಲ್ಲೆಗೆ ಹೇಳುತ್ತೀರೋ ಅಲ್ಲಿಗೆ ನಾನು ಬರಲು ಸಿದ್ಧ. ನಾವೆಲ್ಲರೂ ಸೇರಿ ಬಿಜೆಪಿ ಮಣಿಸೋಣ” ಎಂದು ಕರೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X