ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೀಂದ್ರ ಕುಮಾರ್ ಕೌರವ್ ಅವರ ನ್ಯಾಯಪೀಠವು ಮತ್ತೊಂದು ವರ್ಷದವರೆಗೆ ಮರು ಮೌಲ್ಯಮಾಪನವನ್ನು ತೆರೆಯಲು ನಿರಾಕರಿಸಿದ ಹಿಂದಿನ ನಿರ್ಧಾರದ ಅನುಸಾರ ಅರ್ಜಿಗಳನ್ನು ವಜಾಗೊಳಿದೆ.
ಈ ಸುದ್ದಿ ಓದಿದ್ದೀರಾ? ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು
ಪ್ರಸ್ತುತ ವಿಷಯವು 2017ರಿಂದ 2021ರವರೆಗಿನ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದೆ. ಕಾಂಗ್ರೆಸ್ ಪಕ್ಷವು 2014-15ರಿಂದ 2016-17ರವರೆಗಿನ ವರ್ಷಗಳಿಗೆ ಸಂಬಂಧಿಸಿದ ತೆರಿಗೆ ಕುರಿತು ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿತ್ತು.