ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ: ಕಾಂಗ್ರೆಸ್‌ ಪ್ರಶ್ನೆ

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, ಮೋದಿಯನ್ನು ಹೊಣೆ ಮಾಡಿದರೂ ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ ಎಂದು ಪ್ರಶ್ನಿಸಿದೆ.

ವಲಸಿಗರಿಂದಲೇ ಬಿಜೆಪಿ ಈ ಬಾರಿ ಸೋಲು ಅನುಭವಿಸಿತ್ತು ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ನೀಡಿದ್ದ ಹೇಳಿಕೆ, ಬಿಜೆಪಿಯ ಆಂತರಿಕ ಚರ್ಚೆಗೆ ಕಾರಣವಾಗಿತ್ತು. ಈ ಹೇಳಿಕೆಗೆ ಎಂ ಪಿ ರೇಣುಕಾಚಾರ್ಯ ಕೂಡ ದನಿಗೂಡಿಸಿ, ಡಾ. ಕೆ ಸುಧಾಕರ್‌ ವಿರುದ್ಧ ಹರಿಹಾಯ್ದಿದ್ದರು. ಮುಂದುವರಿದು ‘ಪ್ರಧಾನಿ ಮೋದಿಯನ್ನು ಬೀದಿಬೀದಿ ಸುತ್ತಿಸಿದ್ದೇ ಬಿಜೆಪಿ ಸೋಲಿಗೆ ಕಾರಣ’ ಎಂದು ಹೇಳಿದ್ದರು

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಬಿಜೆಪಿಯ ಹೀನಾಯ ಸೋಲಿಗೆ ಮೋದಿಯೇ ಕಾರಣ ಎಂಬ ವಾಸ್ತವ ಸತ್ಯ ಒಪ್ಪಿಕೊಳ್ಳುವಲ್ಲಿಗೆ ಆತ್ಮಾವಲೋಕನ ಬಂದಿದೆ. ಗೆಲುವಿಗಷ್ಟೇ ಅಲ್ಲ, ಸೋಲಿಗೂ ಮೋದಿಯೇ ಕಾರಣ ಎಂಬ ಸತ್ಯ ಒಪ್ಪಿಕೊಂಡಿದ್ದಕ್ಕೆ ಕರ್ನಾಟಕ ಬಿಜೆಪಿಯನ್ನು ಅಭಿನಂದಿಸಲೇಬೇಕು. ಮೋದಿಯನ್ನು ಹೊಣೆ ಮಾಡಿದರೂ ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ?” ಎಂದು ಕುಟುಕಿದೆ.

Advertisements

“ವಲಸಿಗರಿಂದಲೇ ಬಿಜೆಪಿ ಸೋತಿತು ಎನ್ನುವವರ ಕೂಗಿಗೆ ಈಶ್ವರಪ್ಪನವರ ನಂತರ ರೇಣುಕಾಚಾರ್ಯ ಕೂಡ ದನಿಗೂಡಿಸಿದ್ದಾರೆ. ಪ್ರಣಾಳಿಕೆಯ ಹೊಣೆಯನ್ನು ವಲಸಿಗ ಸುಧಾಕರ್ ಅವರಿಗೆ ಹೊರಿಸಿದ್ದು, ಮತ್ತೊಂದು ಬಣಕ್ಕೆ ಅಸಹನೆ ತರಿಸಿದೆ. ವಲಸಿಗರ ಭವಿಷ್ಯ ಮುಗಿಸಲು ಬಿಜೆಪಿಯಲ್ಲೇ ದೊಡ್ಡ ಪಡೆ ಹೊಂಚು ಹಾಕಿದೆ, ಯಶಸ್ವಿಯೂ ಆಗಿದೆ. ಚುನಾವಣೆಗೂ ಮುಂಚೆ ಕರ್ನಾಟಕ ಬಿಜೆಪಿ ಸ್ಥಿತಿ ಮನೆಯೊಂದು ಮುನ್ನೂರು ಬಾಗಿಲಾಗಿತ್ತು, ಚುನಾವಣೆ ನಂತರ ಮೂರು ಸಾವಿರ ಬಾಗಿಲಾಗಿದೆ” ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X