ಮಣಿಪುರದಲ್ಲಿ ಅಧಿವೇಶನ ಕರೆಯದೆ ಸಂವಿಧಾನದ ನೀತಿಯ ಉಲ್ಲಂಘನೆ; ರಾಜ್ಯಪಾಲರ ವಿರುದ್ದ ಕಾಂಗ್ರೆಸ್‌ ಟೀಕೆ

Date:

Advertisements

ಸಂವಿಧಾನದ 174(1)ನೇ ವಿಧಿಯು ವಿಧಾನಸಭಾ ಅಧಿವೇಶನಗಳ ನಡುವಿನ ಅಂತರ ಆರು ತಿಂಗಳಿಗಿಂತ ಹೆಚ್ಚು ಇರಬಾರದು. ಅಧಿವೇಶನ ಮುಗಿದ ಆರು ತಿಂಗಳೊಳಗೆ ಮತ್ತೊಂದು ಅಧಿವೇಶನ ನಡೆಸಬೇಕು ಎಂದು ಹೇಳುತ್ತದೆ. ಆದರೂ, ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರು ಅಧಿವೇಶನ ನಡೆಸಲು ಸರ್ಕಾರಕ್ಕೆ ಸೂಚಿಸುತ್ತಿಲ್ಲ. ಸಾಂವಿಧಾನಿಕವಾಗಿ ಕಡ್ಡಾಯವಾಗಿರುವ ನಿಯಮವನ್ನು ರಾಜ್ಯಪಾಲರು ಯಾಕೆ ಉಲ್ಲಂಘಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಸುಮಾರು 2ವರ್ಷದಿಂದ ಮಣಿಪುರವು ಜನಾಂಗೀಯ ಹಿಂಸಾಚಾರವನ್ನು ಎದುರಿಸುತ್ತಿದೆ. ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಇದೀಗ, ಹಿಂಸಾಚಾರ ಆರಂಭವಾಗಿ 2 ವರ್ಷಗಳ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ಇದೆಲ್ಲ ಬೆಳವಣಿಗೆಗಳ ನಡುವೆ ಅಧಿವೇಶನ ಕರೆಯದೇ ಇರುವ ರಾಜ್ಯಪಾಲರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಸಾಂವಿಧಾನಿಕ ನಿಯಮದ ಪ್ರಕಾರ, ಮಣಿಪುರ ವಿಧಾನಸಭಾ ಅಧಿವೇಶನ ಕರೆಯಲು ಇಂದು (ಮಂಗಳವಾರ) ಕಡೆಯ ದಿನವಾಗಿದೆ. ಆದರೂ, ರಾಜ್ಯಪಾಲರು ಮೌನವಾಗಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

Advertisements

“ಮಣಿಪುರ ರಾಜ್ಯಪಾಲರು ಮಣಿಪುರ ವಿಧಾನಸಭೆ ಅಧಿವೇಶನವನ್ನು ಕರೆಯದೆ, ಸಂವಿಧಾನದ 174(1)ನೇ ವಿಧಿಯನ್ನು ಯಾಕೆ ಉಲ್ಲಂಘಿಸುತ್ತಿದ್ದಾರೆ?” ರಮೇಶ್ ಹೇಳಿದ್ದಾರೆ.

“ಸೋಮವಾರ ವಿಧಾನಸಭೆ ಕರೆದರೆ, ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನಿರ್ಧರಿಸಿತ್ತು. ಈ ನಡುವೆ, ಬಿರೇನ್ ಸಿಂಗ್ ಭಾನುವಾರ ರಾಜೀನಾಮೆ ನೀಡಿದರು. ಬಿರೇನ್ ಸಿಂಗ್‌ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಬಿಜೆಪಿಗ ಸಾಧ್ಯವಾಗಿಲ್ಲ. ಹೀಗಾಗಿಯೇ, ವಿಧಾನಸಭಾ ಅಧಿವೇಶನವನ್ನೇ ಅನೂರ್ಜಿತಗೊಳಿಸಲಾಗಿದೆ” ಎಂದು ರಮೇಶ್ ಆರೋಪಿಸಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್ ಅವರ ರಾಜೀನಾಮೆ ನೀಡಿದ್ದನ್ನು ‘ವಿಳಂಬ’ ಎಂದು ಕಾಂಗ್ರೆಸ್ ಬಣ್ಣಿಸಿದೆ. ಮುಖ್ಯಮಂತ್ರಿ ರಾಜೀನಾಮೆ ತಡವಾಯಿತು ಎಂದಿದೆ. ರಾಜ್ಯದ ಜನರು ಈಗಲಾದರೂ, ಪ್ರಧಾನಿ ಮೋದಿ ಅವರನ್ನು ರಾಜ್ಯಕ್ಕೆ ಬರಬಹುದೆಂದು ಕಾಯುತ್ತಿದ್ದಾರೆ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X