ಬಜೆಟ್ ಪ್ರತಿಕ್ರಿಯೆ | ಬಿಜೆಪಿಯ ರೈತ ವಿರೋಧಿ ನೀತಿಗಳನ್ನು ಪೋಷಿಸುತ್ತಿರುವ ಕಾಂಗ್ರೆಸ್‌: ಬಡಗಲಪುರ ನಾಗೇಂದ್ರ

Date:

Advertisements

ಎಲ್ಲ ವರ್ಗಕ್ಕೂ ನ್ಯಾಯ ಒದಗಿಸಿದಂತೆ ಮೇಲ್ನೋಟಕ್ಕೆ ಕಂಡುಬಂದರೂ ಕರ್ನಾಟಕದ ಮಾದರಿಗೆ ಯಾವುದೇ ಸ್ಪಷ್ಟತೆಯನ್ನು ರಾಜ್ಯ ಬಜೆಟ್ ಹೊಂದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ವಿಶ್ಲೇಷಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಶೇ.60 ಭಾಗ ಜನರು ಅವಲಂಬಿತರಾಗಿರುವ ಕೃಷಿ ಮತ್ತು ಕೃಷಿಪೂರಕ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ ಕೇವಲ ಶೇ.14 ರಷ್ಟು ಅನುದಾನ ಮೀಸಲಿಡಲಾಗಿದೆ. ಇದರಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

“ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸದೇ ಇರುವುದು ಸರಿಯಲ್ಲ. ಮತ್ತು ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್ ಪಡೆದುಕೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಕೇಂದ್ರ ಸರ್ಕಾರ ಖಾಸಗಿಕರಣ ಮಾಡಲು ಹೊರಟಿರುವ ವಿದ್ಯುತ್ ತಿದ್ದುಪಡಿ ಬಗ್ಗೆ ಚಕಾರ ಎತ್ತಿಲ್ಲ. ಕೃಷಿ ಬೆಲೆ ಆಯೋಗವನ್ನು ಸದೃಢಗೊಳಿಸಲು ಯಾವುದೇ ತೀರ್ಮಾನ ಕೈಗೊಳ್ಳದೆ ಮಾತಿಗೆ ತಪ್ಪಿದ್ದು ಬಿಜೆಪಿ ತಂದಿರುವ ಎಲ್ಲ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣುತ್ತದೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X