ನೆಹರು ವಸ್ತು ಸಂಗ್ರಹಾಲಯ ಹೆಸರು ಬದಲಾವಣೆ: ಪ್ರಧಾನಿಯ ಸೇಡಿನ ರಾಜಕಾರಣ ಎಂದ ಕಾಂಗ್ರೆಸ್

Date:

Advertisements

ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್ಎಂಎಂಎಲ್) ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, “ಅತೀ ದೀರ್ಘಾವಧಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿರುವ ನೆಹರುರವರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಯ, ಸಂಕೀರ್ಣತೆಗಳು ಹಾಗೂ ಅಭದ್ರತೆಯ ದೊಡ್ಡ ಸುಳ್ಳಿನ ಕಂತೆಯನ್ನೇ ಹೊಂದಿದ್ದಾರೆ. ನೆಹರು ಮತ್ತು ಅವರ ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶ ಮಾಡುವ ಏಕೈಕ ಅಂಶದ ಉದ್ದೇಶವನ್ನು ಅವರು ಹೊಂದಿದ್ದಾರೆ. ಅವರು ‘ಎನ್‌’ ಅಳಿಸಿ ಬದಲಿಗೆ ‘ಪಿ’ ಎಂದು ಹಾಕಿದ್ದಾರೆ. ‘ಪಿ’ ಯು ಕ್ಷುಲ್ಲಕತೆ ಮತ್ತು ಸೇಡಿನ ರಾಜಕಾರಣವನ್ನು ಹೊಂದಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ದ್ವಾರಕಾ ಎಕ್ಸ್‌ಪ್ರೆಸ್‌ವೇ | ಅನುಮೋದಿಸಿದ್ದು ಕಿಮೀಗೆ 18 ಕೋಟಿ, ಖರ್ಚಾಗಿದ್ದು 250 ಕೋಟಿ; ಸಿಎಜಿ ವರದಿ

Advertisements

“ಆದರೆ ಸ್ವಾತಂತ್ರ್ಯ ಚಳವಳಿಯಲ್ಲಿ ನೆಹರುರವರ ಅಮೋಘ ಕೊಡುಗೆಗಳನ್ನು ಮತ್ತು ಭಾರತ ರಾಷ್ಟ್ರದ ಪ್ರಜಾಸತ್ತಾತ್ಮಕ, ಜಾತ್ಯತೀತ, ವೈಜ್ಞಾನಿಕ ಮತ್ತು ಉದಾರವಾದಿ ಅಡಿಪಾಯಗಳನ್ನು ನಿರ್ಮಿಸುವಲ್ಲಿ ಅವರ ಅತ್ಯುನ್ನತ ಸಾಧನೆಗಳನ್ನು ಅವರು ಎಂದಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೆಹರು ಅವರ ಕೊಡುಗೆಗಳು ಈಗ ಮೋದಿ ಮತ್ತು ಅವರ ಹೊಗಳುಭಟ್ಟರ ಆಕ್ರಮಣಕ್ಕೆ ಒಳಗಾಗಿವೆ”ಎಂದು ಬೇಸರ ವ್ಯಕ್ತಪಡಿಸಿದರು.

“ನಿರಂತರ ದಾಳಿಯ ಹೊರತಾಗಿಯೂ, ಜವಾಹರಲಾಲ್ ನೆಹರುರವರ ಪರಂಪರೆಯು ಜಗತ್ತಿಗೆ ಕಾಣಿಸುತ್ತದೆ ಮತ್ತು ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X