ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಖಂಡನೆ; ಕಾಂಗ್ರೆಸ್‌ನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನ

Date:

Advertisements

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ, ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾಹಿತಿ ನೀಡಿದ್ದು, ಅಭಿಯಾನದಡಿಯಲ್ಲಿ ಪಕ್ಷದ ಮುಖಂಡರು ಪ್ರತಿ ಜಿಲ್ಲೆಯಲ್ಲೂ ‘ಚೌಪಾಲ್’ಗಳನ್ನು ಆಯೋಜಿಸಿ ಬಿಜೆಪಿ-ಆರ್‌ಎಸ್‌ಎಸ್ ದಶಕಗಳಿಂದ ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸುತ್ತಿದೆ ಮತ್ತು ಸಂವಿಧಾನವನ್ನು ಯಾವೆಲ್ಲ ರೀತಿಯಲ್ಲಿ ಅವಮಾನಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗೃಹಸಚಿವ ಅಮಿತ್ ಶಾ ವಿರುದ್ಧ ಜ.9ರಂದು‌ ʼವಿಜಯನಗರ ಬಂದ್’ಗೆ ಕರೆ

Advertisements

ಜನವರಿ 3ರಂದು ಅಭಿಯಾನವು ಪ್ರಾರಂಭವಾಗಿದ್ದು ಜನವರಿ 26ರವರೆಗೆ ನಡೆಯಲಿದೆ. ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ ಮೂಲಕ ಈ ಅಭಿಯಾನ ಕೊನೆಯಾಗಲಿದೆ ಎಂದು ಖೇರಾ ಹೇಳಿದರು.

“ಅಂಬೇಡ್ಕರ್ ಅವರ ಪರಂಪರೆ ಮತ್ತು ಮೌಲ್ಯಗಳನ್ನು ಕಾಪಾಡಲು 2025ರ ಜನವರಿ 26ರಿಂದ 2026ರ ಜನವರಿ 26ರವರೆಗೆ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ (ಸಂವಿಧಾನ ಉಳಿಸಿ ಆಂದೋಲನ) ದೇಶದಾದ್ಯಂತ ನಡೆಸಲಾಗುತ್ತದೆ” ಎಂದು ಕೂಡಾ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಸತ್ಯ ಶೋಧ | ಅಂಬೇಡ್ಕರ್ RSS ಶಾಖೆಗೆ ಹೋಗಿದ್ದರು ಎಂಬುದು ಶುದ್ಧ ಸುಳ್ಳು

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂಬ ನಮ್ಮ ಬೇಡಿಕೆಯನ್ನು ನಾವು ಮತ್ತೆ ಮತ್ತೆ ಪುನರುಚ್ಚರಿಸುತ್ತೇವೆ ಎಂದು ಹೇಳಿದರು.

ದೇಶದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರಂತಹ ರಾಷ್ಟ್ರೀಯ ನಾಯಕರನ್ನು ರಾಕ್ಷಸೀಕರಣ ಮಾಡುವ ಎಲ್ಲಾ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X