ಸಾವರ್ಕರ್ ಗುಣಗಾನ ಮಾಡಿದ್ದ ಕಾಂಗ್ರೆಸ್‌ ನಾಯಕ ದೇಶ್‌ಪಾಂಡೆ; ಟೀಕೆ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

Date:

Advertisements

ಸಾವರ್ಕರ್ ಜನ್ಮದಿನವಾದ ಮೇ 28ರಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್‌ ಗುಣಗಾನ ಮಾಡಿ ಪೋಸ್ಟ್‌ ಹಾಕಿದ್ದರು. ಅವರ ಪೋಸ್ಟ್‌ಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಇದೀಗ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದ್ದಾರೆ.

ಸಾವರ್ಕರ್ ಗುಣಗಾನ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದ ಆರ್‌.ವಿ ದೇಶ್‌ಪಾಂಡೆ, “ಯುವಕರಲ್ಲಿ ದೇಶಭಕ್ತಿಯ ಜ್ವಾಲೆಯನ್ನು ಬೆಳಗಿಸಿ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಸಾರವನ್ನು ಸಾರಿದ ಅಪ್ರತಿಮ ದೇಶಭಕ್ತರಾಗಿದ್ದ ಸಾವರ್ಕರ್ ಜನ್ಮದಿನದಂದು ಗೌರವಪೂರ್ವಕ ನಮನಗಳು” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಅವರ ಪೋಸ್ಟ್‌ ವಿರುದ್ಧ ಭಾರೀ ಆಕ್ರೋಶ, ಟೀಕೆಗಳು ವ್ಯಕ್ತವಾಗಿವೆ. ಈ ಬೆನ್ನಲ್ಲೇ, ತಮ್ಮ ಪೋಸ್ಟ್‌ಅನ್ನು ದೇಶ್‌ಪಾಂಡೆ ಡಿಲೀಟ್‌ ಮಾಡಿದ್ದಾರೆ.

Advertisements

ಅಂದಹಾಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವಾರು ನಾಯಕರು ಸಾವರ್ಕರ್ ಅವರನ್ನು ಟೀಕಿಸುತ್ತಾರೆ. “ಬ್ರಿಟಿಷರ ಬಳಿ ಕ್ಷಮೆ ಕೇಳಿದ್ದ ಸಾವರ್ಕರ್‌, ಬ್ರಿಟಿಷರ ಸಹಯೋಗಿಯಾಗಿದ್ದರು. ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

WhatsApp Image 2025 05 28 at 2.35.56 PM

ಅಲ್ಲದೆ, ದೇಶದಲ್ಲಿ ಕೋಮುವಾದವನ್ನು ಹುಟ್ಟುಹಾಕಿದ್ದು, ಮುಸ್ಲಿಂ ದ್ವೇಷವನ್ನು ಹರಡಿದ್ದು ಕೂಡ ಸಾವರ್ಕರ್ ಎಂದು ಕಾಂಗ್ರೆಸ್ಸಿಗರು ಸೇರಿದಂತೆ ಹಲವರು ಆರೋಪಿಸಿದ್ದಾರೆ. ಹೀಗಿದ್ದರೂ, ಕರ್ನಾಟಕದಲ್ಲಿ ಸಂಘಪರಿವಾರದ ಕೋಮು ಪ್ರಯೋಗಶಾಲೆಯಾಗಿರುವ ಕರಾವಳಿ ಭಾಗದವರೇ ಆದ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್ ಗುಣಗಾನ ಮಾಡಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿತ್ತು.

“ಎರಡು ತಾಸಿನ ಹಿಂದೆ ಸಾವರ್ಕರ್ ಭಜನೆ ಮಾಡಿದ್ದ ಪೋಸ್ಟರ್ ಡಿಲೀಟಾಗಿದೆ! ಅರುವು ಆಗಿದೆ. ದೇಹ ಕಾಂಗ್ರೆಸ್‌ನಲ್ಲಿದೆ. ಆತ್ಮ ಮಾತ್ರ ಬಿಜೆಪಿಯಲ್ಲಿದೆ. ಇಂಥ ಆತ್ಮಗಳು ಕಾಂಗ್ರೆಸ್‌ನಲ್ಲಿ ತುಂಬಾ ಇವೆ…. ಸ್ವಚ್ಛ ಆಗದಿದ್ದರೆ ನಷ್ಟ ಕಾಂಗ್ರೆಸ್ಸಿಗೆ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X