ಬೆಂಗಳೂರು ಮೇಲೂ ಪಾಕ್ ದಾಳಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ

Date:

Advertisements

ಬೆಂಗಳೂರು ನಗರದ ಮೇಲೂ ಪಾಕಿಸ್ತಾನ ದಾಳಿ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸಿರುವ ಯುವ ಬ್ರಿಗೇಡ್‌ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ನಾಯಕ ಎಸ್ ಮನೋಹರ್ ಮನವಿ ಮಾಡಿದ್ದಾರೆ.

ನಿರಂತರವಾಗಿ ಸುಳ್ಳು ಹೇಳಿಕೆ, ತಪ್ಪು ಮಾಹಿತಿ ಪ್ರಚಾರ ಮಾಡುವ ಮೂಲಕ ಸುದ್ದಿಯಾಗುತ್ತಿರುವ ಸೂಲಿಬೆಲೆ, ಇತ್ತೀಚೆಗೆ ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಈ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಯತ್ನ ಮಾಡಿದ್ದರು.

ಇದನ್ನು ಓದಿದ್ದೀರಾ? ಕೋಮು ದ್ವೇಷ ಭಾಷಣ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

Advertisements

ಅಷ್ಟು ಮಾತ್ರವಲ್ಲದೆ ಪಾಕಿಸ್ತಾನದ ಉಗ್ರರ ಜೊತೆ ಭಾರತದ ಏಜೆಂಟ್‌ಗಳು ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಿದ್ದರು. ದೇಶದ ಗೌಪ್ಯ ವಿಚಾರಗಳನ್ನ ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೇರೆ ಅಲ್ಲ ಪಾಕಿಸ್ತಾನ ಬೇರೆ ಅಲ್ಲ ಎಂದೂ ಹೇಳಿದ್ದರು. ಈ ಹೇಳಿಕೆಗಳನ್ನು ಖಂಡಿಸಿ ಚಕ್ರವರ್ತಿ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ.

ಈ ಸಂಬಂಧ ಬೆಂಗಳೂರು ನಗರದ ವಸಂತನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗೆ ಕಾಂಗ್ರೆಸ್ ನಾಯಕರು ಮನವಿ ನೀಡಿದ್ದಾರೆ. “ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಿರಂತರವಾಗಿ ದಾಳಿ ನಡೆಸುತ್ತಿದೆ ಹಾಗೂ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿ ಭಾರತದ ಸೈನಿಕರ ಆತ್ಮಸ್ಥೈರ್ಯವನ್ನು ಕುಗ್ಗಿಸುವಂತಹ ಭಾಷಣ ಮಾಡುತ್ತಿದ್ದಾನೆ. ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾನೆ. ಆತನ ವಿರುದ್ಧ ಕೂಡಲೇ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ಬಂಧಿಸಬೇಕು” ಎಂದು ದೂರು ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕೇಂದ್ರ ಸರ್ಕಾರ ಟೀಕಿಸಿದ ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

“ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ ಪಾಕಿಸ್ತಾನ ಎಂಬ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾನೆ. ಸುಳ್ಳನ್ನು ಪ್ರಚಾರ ಮಾಡಿ ಸತ್ಯದ ರೀತಿಯಲ್ಲಿ ಬಿಂಬಿಸಿ ದೇಶದ ಯೋಧರ ಆತ್ಮಬಲವನ್ನು ಕುಗ್ಗಿಸುವ ಹೇಳಿಕೆ ನೀಡುತ್ತಾ ಬಂದಿದ್ದಾನೆ” ಎಂದು ದೂರಿದ್ದಾರೆ.

“ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಂಭವವಿದೆ ಎಂಬುವ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾನೆ. ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂಬುವ ಆರೋಪ ಹಾಗೂ ಆಧಾರರಹಿತ ಹೇಳಿಕೆ ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕೂಡಲೇ ಈತನ ಕಾನೂನಾತ್ಮಕವಾಗಿ ತನಿಖೆಗೆ ಒಳಪಡಿಸಿ ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ವಿನಂತಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X