‘ವಿನ್ನಿಂಗ್ ಮ್ಯಾಚ್’ಅನ್ನೂ ಸೋಲುವುದು ಹೇಗೆ ಅಂತ ಕಾಂಗ್ರೆಸ್‌ನಿಂದ ಕಲೀಬೇಕು

Date:

Advertisements

ಹರಿಯಾಣದಲ್ಲಿ ಬಿಜೆಪಿ ಆಡಳಿತ ಅಂತ್ಯವಾಗಲಿದೆ. ಕಾಂಗ್ರೆಸ್‌ ಭಾರೀ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂಬ ಅಭಿಪ್ರಾಯ ದೇಶಾದ್ಯಂತ ಇತ್ತು. ಆಡಳಿತಾರೂಢ ಬಿಜೆಪಿಯೇ ಸ್ವತಃ ಸೋಲೊಪ್ಪಿಕೊಂಡಿತ್ತು. ಆದಾಗ್ಯೂ, ಬಿಜೆಪಿ ಮತ್ತೆ ಗೆದ್ದಿದೆ. ಗೆಲ್ಲುವ, ಗುಲ್ಲುತ್ತೇವೆಂಬ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ ಮತ್ತೆ ಸೋಲುಂಡಿದೆ. ಕಾಂಗ್ರೆಸ್‌ ಸೋಲಿನ ವಿಪಕ್ಷಗಳಿಂದಲೇ ಟೀಕೆ ವ್ಯಕ್ತವಾಗುತ್ತಿದೆ. ಆತ್ಮಾವಲೋಕನದ ಸಲಹೆಗಳೂ ಬರುತ್ತಿದೆ. ಇದೀಗ, ಕಾಂಗ್ರೆಸ್‌ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಉದ್ಧವ್ ಬಣ) ಸಂಸದ ಸಂಜತ್ ರಾವತ್, “ವಿನ್ನಿಂಗ್‌ ಮ್ಯಾಚ್‌ನಲ್ಲೂ ಸೋಲುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಕಲಿಯಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌-ಎಎಪಿ ಮೈತ್ರಿಯಲ್ಲಿ ಸ್ಪರ್ಧಿಸಲು ಮುಂದಾಗಿದ್ದವು. ಆದರೆ, ಕೊನೆ ಕ್ಷಣದಲ್ಲಿ ಮೈತ್ರಿ ಮುರಿದು ಸ್ವತಂತ್ರವಾಗಿ ಸ್ಪರ್ಧಿಸಿದ್ದವು. ಇದನ್ನು ಉಲ್ಲೇಖಿಸಿ ಮಾತನಾಡಿದ ಸಂಜಯ್ ರಾವತ್, “ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಈಗಲೂ ಕಾಂಗ್ರೆಸ್‌ ನಂಬಿದೆ. ಪಕ್ಷದ ಸೋಲಿಗೆ ಅತಿಯಾದ ಆತ್ಮವಿಶ್ವಾಸವೇ ಕಾರಣ. ಗೆಲುವಿನ ಪಂದ್ಯವನ್ನು ಸೋಲಿನ ಪಂದ್ಯವಾಗಿ ಪರಿವರ್ತಿಸಿದೆ” ಎಂದು ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ ಕೂಡ ಕಾಂಗ್ರೆಸ್‌ ಸೋಲಿನ ಬಗ್ಗೆ ಸಂಪಾದಕೀಯ ಬರೆದಿದ್ದು, “ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದೆ. ಕಳಪೆ ಪ್ರಚಾರವು ಸೋಲಿಗೆ ಕಾರಣವಾಗಿದೆ. ಹರಿಯಾಣದಲ್ಲಿ ಬಿಜೆಪಿ ವಿರುದ್ಧ ಆಡಳಿತದ ವಿರೋಧಿ ಅಲೆ ಇದ್ದರೂ, ಅದರ ಲಾಭ ಪಡೆಯುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಸೋತಿದೆ” ಎಂದು ಹೇಳಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X