ಇನ್ನೊಮ್ಮೆ ಹೀಗಾದ್ರೆ, ವಾರ್ಡನ್‌ಗೆ ಚೆನ್ನಾಗಿ ಬಾರಿಸಿ : ಚಿತ್ರದುರ್ಗ ಶಾಸಕರ ಪ್ರಚೋದನೆ; ವಿಡಿಯೋ ವೈರಲ್

Date:

Advertisements
  • ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
  • ‘ಹೊಡೆಯಿರಿ’ ಎಂದು ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

‘ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ ಬಾರಿಸಿ’ ಎಂದು ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಪ್ರಚೋದನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಚಿತ್ರದುರ್ಗದಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಊಟ ಸರಿಯಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಖುದ್ದು ಪರಿಶೀಲನೆ ನಡೆಸಲು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಸ್ಟೆಲ್‍ಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಊಟ-ತಿಂಡಿಯಲ್ಲಿ ಕೊಳೆತ ತರಕಾರಿ ಬಳಸಲಾಗುತ್ತಿದೆ. ಅನ್ನದಲ್ಲಿ ಹುಳಗಳು ಸಿಗುತ್ತವೆ ಎಂದು ದೂರಿದ್ದರು.

Advertisements

ಇದರಿಂದ ಸಹನೆ ಕಳೆದುಕೊಂಡ ಶಾಸಕರು, ‘ಅನ್ನದಲ್ಲಿರುವ ಹುಳಗಳನ್ನು ಆರಿಸಿ ತಟ್ಟೆಯಲ್ಲಿ ಹಾಕಿ ವಾರ್ಡನ್‍ಗೆ ಊಟ ಮಾಡಿಸಿ, ಬಳಿಕ ವಾರ್ಡನ್ ಅನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಬಾರಿಸಿ, ಆಮೇಲೆ ಏನಾಗುತ್ತೋ ನೋಡೋಣ, ನಾನಿದ್ದೀನಿ’ ಎಂದು ಪ್ರಚೋದನೆ ನೀಡಿದ್ದಾರೆ.

‘ಈ ರೀತಿ ಮಾಡದೇ ಇದ್ದರೆ ಹಾಸ್ಟೆಲ್‍ನ ವ್ಯವಸ್ಥೆ ಸರಿ ಹೋಗುವುದಿಲ್ಲ. ಎಷ್ಟು ಸಾರಿ ಹೇಳಿದರೂ ಇವರು ಬುದ್ಧಿ ಕಲಿಯುವುದಿಲ್ಲ’ ಎಂದು ಶಾಸಕರು ಪೊಲೀಸರ ಸಮ್ಮುಖದಲ್ಲೇ ವಿದ್ಯಾರ್ಥಿಗಳು ವಾರ್ಡನ್‌ಗೆ ಥಳಿಸುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

‘ಜನಪ್ರತಿನಿಯೊಬ್ಬರು ಈ ರೀತಿ ಪ್ರಚೋದನಾತ್ಮಕವಾಗಿ ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಕಾನೂನು ಕೈಗೆತ್ತಿಕೊಂಡರೆ ಅದರಿಂದಾಗುವ ಅನಾಹುತಕ್ಕೆ ಯಾರು ಹೊಣೆ’ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X