ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ತಿಳಿದ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್

Date:

Advertisements

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅನ್ನೋದು ನನಗೂ ಗೊತ್ತು. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು, ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ಗೊತ್ತಿರುವ ಸಂಗತಿ ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

ಕೋಲಾರದಲ್ಲಿ ಸೋಮವಾರ ಸುದ್ದಿಗಾರರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿ, “ಈ ಬಾರಿ ಬಿಜೆಪಿ ಬರಲಿ. ಮುಂದಿನ ಚುನಾವಣೆ ನಮ್ಮ ಗುರಿ. ಅದಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ” ಎಂದರು.

“ರಾಜ್ಯದಲ್ಲಿ 50-50 ಫಲಿತಾಂಶ ​​ಬರಲಿದೆ. ಕೋಲಾರದಲ್ಲಿ 29 ಸಾವಿರ ಮತಗಳಿಂದ ಕಾಂಗ್ರೆಸ್ ಗೆಲ್ಲದೆ. ರಮೇಶ್ ಕುಮಾರ್​ಗೆ ವಿಧಾನ ಪರಿಷತ್​ ಟಿಕೆಟ್ ಕೇಳಿದ್ದೆವು. ಅದು ಸಿಗಲಿಲ್ಲ. ಮುಂದೆ ಒಳ್ಳೆ ಅವಕಾಶ ಸಿಗಬಹುದು. ರಾಜ್ಯದಲ್ಲಿ ಸಚಿವ ಸ್ಥಾನ ಬದಲಾವಣೆಯಾದರೆ ಕೋಲಾರಕ್ಕೂ ಸಚಿವ ಸ್ಥಾನ ಸಿಗಲಿದೆ” ಎಂದು ತಿಳಿಸಿದರು.

Advertisements

“ಚುನಾವಣೆ‌ ನೀತಿ ಸಂಹಿತೆ ಮುಗಿದ ಕೂಡಲೇ ಅಭಿವೃದ್ದಿ ಕೆಲಸಗಳು ಆರಂಭವಾಗಲಿದೆ. ರಿಂಗ್ ರೋಡ್‌ಗೆ ಡಿಪಿಆರ್ ಆಗಿದೆ. ಮೂರು ತಿಂಗಳ‌ ಒಳಗೆ ಟಿಂಡರ್ ಪ್ರಕ್ರಿಯೆ ಸಹ ಮುಗಿಯಲಿದೆ. ಎಪಿಎಂಸಿ ಜಾಗ ಕೂಡಲೇ ಆಗಲಿದೆ. ಚಲುವನಹಳ್ಳಿ ಜಾಗ‌ ನೋಡಿದ್ದು, ಅದೇ ಪೈನಲ್‌ ಆಗಲಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X