ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

Date:

  • ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ
  • ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ

“ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ ರಾಶಿ, ಜೊತೆಗೊಂದು ಮಾರಕಾಸ್ತ್ರ ಇರುತ್ತದೆ. ಈ ʼಸಿಟಿʼ ರವಿಗೂ, ಕಾರು ಆಘಾತಕ್ಕೂ, ʼಓಟಿʼ ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಧರ್ಮ, ಸಂಸ್ಕೃತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆ!” ಎಂದು ಕುಟುಕಿದೆ.

“ ʼಸಿಟಿʼ ರವಿಗೂ ʼಓಟಿʼ ಮದ್ಯಕ್ಕೂ ಯಾವ ಜನ್ಮದ ಮೈತ್ರಿ ಇದೆಯೋ? ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂದಿದ್ದೇ ಸಿ ಟಿ ರವಿ ಅವರೇ? ಹೆಂಡ ಪೂರೈಕೆ ಮಾಡಲೆಂದೇ ವಾರಕ್ಕೊಮ್ಮೆ ಮೋದಿ, ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ?” ಎಂದು ಕಿಚಾಯಿಸಿದೆ.

“ಶಾಸಕರಿಗೆ “ಬಾಂಬೆ ಮಿಠಾಯಿ” ಆಮಿಷ ತೋರಿಸಿ ಆಪರೇಷನ್ ಮಾಡುವ ಬಿಜೆಪಿ ಮತದಾರರಿಗೆ ಹೆಂಡ ತೋರಿಸಿ ಮತ ಪಡೆಯಲು ಮುಂದಾಗಿದೆ. ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸಂಬಂಧಿಸಿದ ಕಾರಿನಲ್ಲಿ “ಓಟಿ ಮದ್ಯ” ಹಾಗೂ ಲಾಂಗ್ ಪತ್ತೆಯಾಗಿದೆ. ಹೆಂಡ ಕುಡಿಸಿ, ಬೆದರಿಸಿ ಮತ ಪಡೆಯುವ ಜವಾಬ್ದಾರಿಯನ್ನು ರೌಡಿ ಮೋರ್ಚಾಗೆ ವಹಿಸಲಾಗಿದೆಯೇ” ಎಂದು ಬಿಜೆಪಿಯನ್ನು ಹಿಯಾಳಿಸಿದೆ.

ಚಿಕ್ಕಮಗಳೂರು ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ ಟಿ ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...