ಪ್ರಧಾನಿ ಹುದ್ದೆಗೆ ಕಾಂಗ್ರೆಸ್‌ ಆಸಕ್ತಿ ಹೊಂದಿಲ್ಲ: ವಿಪಕ್ಷಗಳ ಸಭೆಯಲ್ಲಿ ಖರ್ಗೆ ಹೇಳಿಕೆ

Date:

ಕಾಂಗ್ರೆಸ್ ಪಕ್ಷ ಅಧಿಕಾರ ಹೊಂದಲು ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ. ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ವಿಪಕ್ಷಗಳ ಮಹಾ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ರಾಜ್ಯ ಮಟ್ಟದಲ್ಲಿ ನಮ್ಮಲ್ಲಿ ಕೆಲವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬುದು ನಮಗೆ ತಿಳಿದಿದೆ, ಈ ಭಿನ್ನಾಭಿಪ್ರಾಯಗಳು ಸೈದ್ಧಾಂತಿಕವಲ್ಲ, ಈ ಭಿನ್ನಾಭಿಪ್ರಾಯಗಳು ಅಷ್ಟು ದೊಡ್ಡದಲ್ಲ. ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ತೆರೆಮರೆಯಲ್ಲಿ ಮೌನವಾಗಿ ಹತ್ತಿಕ್ಕಲಾಗುತ್ತಿದೆ. ನಾವು ಇವರೆಲ್ಲರ ಪರ ಹೋರಾಟ ನಡೆಸುವುದು ಮುಖ್ಯವಾಗಿದೆ” ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಾವು 26 ಪಕ್ಷಗಳಿದ್ದು, 11 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ. ಬಿಜೆಪಿ ಸ್ವತಃ 303 ಸ್ಥಾನಗಳನ್ನು ಪಡೆಯಲು ಸಾಧ್ಯವಾಗದೆ ಮಿತ್ರಪಕ್ಷಗಳ ಮತಗಳನ್ನು ಬಳಸಿತು. ಕೆಲಸವಾದ ನಂತರ ತಿರಸ್ಕರಿಸಿತು” ಸರ್ಕಾರದ ನೀತಿಯನ್ನು ಟೀಕಿಸಿದರು.

ಎರಡು ದಿನಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದಾರೆ. ಜುಲೈ 17ರ ಮೊದಲ ದಿನದಂದು ಔತಣಕೂಟದಲ್ಲಿ ಭಾಗವಹಿಸದ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಕೂಡ ಇಂದಿನ ಚರ್ಚೆಯ ಸಭೆಯಲ್ಲಿ ಭಾಗವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಕಿಯಾ ಬೆಂಗಳೂರು: ಊಟ ಮಾಡುತ್ತಿರುವಾಗ ದಿಢೀರನೆ ತಟ್ಟೆ ಮೇಲೆ ಬಿದ್ದ ಸತ್ತ ಇಲಿ!

ವಿಪಕ್ಷಗಳ ಮೈತ್ರಿಕೂಟದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಅವರನ್ನು ನೇಮಿಸುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳ ಮೈತ್ರಿಕೂಟಕ್ಕೆ ಹೆಸರು, ರಚನೆ ಮತ್ತು ಸಾಮಾನ್ಯ ಕಾರ್ಯಸೂಚಿಯನ್ನು ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸೋಮವಾರ ರಾತ್ರಿ ಔತಣಕೂಟದ ಸಭೆಯಲ್ಲಿ ಗುಂಪಿನ ಹೆಸರನ್ನು ಸೂಚಿಸಲು ಭಾಗವಹಿಸದ ಎಲ್ಲ ಪಕ್ಷಗಳನ್ನು ಕೇಳಲಾಯಿತು ಮತ್ತು ಸದ್ಯ ನಾಲ್ಕೈದು ಹೆಸರುಗಳು ಈಗ ಪರಿಗಣನೆಯಲ್ಲಿವೆ.

ಈ ಹಿಂದೆ ಸಂಯುಕ್ತ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು “ಭಾರತ” ಎಂಬ ಪದವನ್ನು ಹೆಸರಿಸುವುದು ಬೇಡ ಎಂದು ಪ್ರಸ್ತಾಪಿಸಿದರು. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು “ಫ್ರಂಟ್” ಪದವನ್ನು ಕೈಬಿಡಲು ಶಿಫಾರಸು ಮಾಡಿದ್ದಾರೆ. ಸದ್ಯ “ಯುನೈಟೆಡ್ ವಿ ಸ್ಟ್ಯಾಂಡ್” ಎಂಬ ಅಡಿಬರಹ ಇರುತ್ತದೆ. ವಿರೋಧ ಪಕ್ಷಗಳು ಒಂದು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಒಳಗೊಂಡ ಎರಡು ಉಪಸಮಿತಿಗಳನ್ನು ಘೋಷಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...