ರಾಹುಲ್‌ ಅನರ್ಹತೆ; ಒಗ್ಗಟ್ಟು ಪ್ರದರ್ಶಿಸಿದ ಪ್ರತಿಪಕ್ಷಗಳು

Date:

  • ವಿಜಯ ಚೌಕ್‌ನಲ್ಲಿ ಕಾಂಗ್ರೆಸ್‌ ಸೇರಿ ಪ್ರತಿಪ`ಕ್ಷಗಳ ಪ್ರತಿಭಟನೆ
  • ರಾಹುಲ್‌ ಗಾಂಧಿಗೆ 2 ವರ್ಷ ಜೈಲು ವಿಧಿಸಿರುವ ಸೂರತ್‌ ಕೋರ್ಟ್‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಳಿಸಿರುವುದು ಪ್ರತಿಪಕ್ಷಗಳನ್ನು ಒಂದೇ ವೇದಿಕೆಗೆ ಕರೆತಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಜೊತೆ ಇತರ ಅನೇಕ ಪ್ರತಿಪಕ್ಷಗಳು ಒಗ್ಗೂಡಿವೆ.

ಅದಾನಿ ಹಗರಣವನ್ನು ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲು ಆಗ್ರಹಿಸಿ ದೆಹಲಿಯ ವಿಜಯ ಚೌಕ್‌ನಲ್ಲಿ ಕಾಂಗ್ರೆಸ್‌ ಹಾಗೂ ಇತರ ಎಡ ಪಕ್ಷಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಈ ವೇಳೆ ಪೊಲೀಸರು ಪ್ರತಿಪಕ್ಷಗಳ ನಾಯಕರನ್ನು ಬಂಧಿಸಿದರು. ದೆಹಲಿ ಪೊಲೀಸ್‌ ವಾಹನದಲ್ಲಿ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳ ನಾಯಕರು ಇರುವ ವಿಡಿಯೋವನ್ನು ಪಕ್ಷ ಹಂಚಿಕೊಂಡಿದೆ.

2019ರ ಲೋಕಸಭೆ ಚುನಾವಣೆಗೆ ಪ್ರಚಾರದ ವೇಳೆ ಕೋಲಾರದಲ್ಲಿ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಸಂಬಂಧ ಮಾರ್ಚ್‌ 23 ರಂದು ಸೂರತ್‌ ನ್ಯಾಯಾಲಯ ರಾಹುಲ್‌ ಅವರನ್ನು ತಪ್ಪಿತಸ್ಥ ಎಂದು ಕರೆದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಗಂಟೆಗಳ ನಂತರ ವಿಜಯ ಚೌಕ್‌ನಲ್ಲಿ ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್‌ ಕರೆ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ಅನೇಕ ಪ್ರತಿಪಕ್ಷಗಳ ನಾಯಕರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಅವರ ಅನರ್ಹತೆ ಪ್ರತಿಪಕ್ಷಗಳನ್ನು ಮೌನವಾಗಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದಕ್ಕಾಗಿ ಕಾಂಗ್ರೆಸ್‌ ನಾಯಕರು ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂಬ ಬ್ಯಾನರ್‌ಅನ್ನು ಸಂಸತ್ತಿನ ಆವರಣದಲ್ಲಿ ಪ್ರದರ್ಶಿಸಿದರು. ಕೆಲವು ಪಕ್ಷಗಳು ಅದಾನಿ ಹಗರಣ ತನಿಖೆಗೆ ಜೆಪಿಸಿ ರಚಿಸಬೇಕು ಎಂದು ಒತ್ತಾಯಿಸಿದವು. ದೆಹಲಿ ಪೊಲೀಸರ ವಾಹನದಲ್ಲಿದ್ದ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳ ನಾಯಕರು ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಕಾಂಗ್ರೆಸ್‌ ಸಂಸದ ಇಮ್ರಾನ್‌ ಪ್ರತಾಪ್‌ಗರ್ಹಿ ಹಾಗೂ ಇತರರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಬಹುತೇಕ ಪ್ರತಿಪಕ್ಷಗಳು ವಿಜಯ ಚೌಕ್‌ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ರಾಹುಲ್‌ ಅವರಿಗೆ ಶಿಕ್ಷೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿ ಜನರಿಂದ ಯಾವುದೋ ವಿಚಾರ ಮುಚ್ಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ಲಲಿತ್‌ ಮೋದಿ, ವಿಜಯ್‌ ಮಲ್ಯ ಮೊದಲಾದವರು ಕೋಟ್ಯಂತರ ರೂಪಾಯಿ ದೋಚಿ ದೇಶದಿಂದ ಓಡಿಹೋಗಿದ್ದಾರೆ. ಅಂತಹವರ ಬಗ್ಗೆ ಮೊದಿ ಮೌನವಾಗಿದ್ದಾರೆ” ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಜಯ ಚೌಕ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

“ಕಾಂಗ್ರೆಸ್‌ ಯಾವಾಗಲೂ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಪರ ನಿಂತಿದೆ ಹಾಗೂ ಹೋರಾಡಿದೆ. ಮನುವಾದದಲ್ಲಿ ನಂಬಿಕೆ ಇರಿಸಿರುವ ಜನ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಾರೆ” ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ...

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಧರ್ಮ ರಾಜಕಾರಣಕ್ಕೆ ಹೆಣ್ಣಿನ ಸಾವೂ ಒಂದು ಅಸ್ತ್ರ; ನೇಹಾಳಂತಹ ದುರ್ಘಟನೆಗಳಾದಾಗ ಅವರಿಗೆ ಖುಷಿಯಾಗುತ್ತದೆ

ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ ನಡೆದಿದೆ. ಫಯಾಜ್‌ ಎಂಬುವವನು ನೇಹಾ ಎಂಬ...