ಬಿ.ಗೋಪಾಲ್, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಹಲವು ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

  • ಜಿ.ಪರಮೇಶ್ವರ್, ಆಂಜನೇಯ, ಕೆ.ಎಚ್ ಮುನಿಯಪ್ಪ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
  • ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್, ನಿಂಬಣ್ಣ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ದಲಿತ ಬಲ ದೊರಕಿದೆ.

ಮಂಗಳವಾರ ಬೆಂಗಳೂರಿನ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಯ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷ ಸೇರಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ದಲಿತ ಮುಖಂಡರಾದ ಸುಧಾಮ್ ದಾಸ್, ನಿಂಬಣ್ಣ, ಬಿಎಸ್ಪಿ ಪಕ್ಷದ ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಸದಸ್ಯರಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಆಡಳಿತದ ಅವಧಿಯಲ್ಲಿ ದಲಿತ ಸಂವೇದನೆಗಳಿಗೆ ಪೆಟ್ಟು ಬೀಳುತ್ತಿದ್ದು, ಅದರ ರಕ್ಷಣೆ ಸಲುವಾಗಿ ದಲಿತ ಸಮುದಾಯ ಒಗ್ಗೂಡಬೇಕಿದೆ. ಅದಕ್ಕೆ ರಾಜಕೀಯ ಬೆಂಬಲದ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಈ ಹಿಂದಿನಿಂದಲೂ ದಲಿತ ಸಮುದಾಯಗಳ ಹಿತ ಕಾಯ್ದುಕೊಂಡು ಬಂದಿದೆ. ಹೀಗಾಗಿ ನಾವುಗಳು ಪಕ್ಷ ಸೇರ್ಪಡೆಗೊಂಡಿದ್ದೇವೆ ಎಂದು ಮುಖಂಡರು ಹೇಳಿದರು

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...