ಕಾಂಗ್ರೆಸ್, ಸಮಾಜವಾದಿ ಪಕ್ಷವು ಪಾಕಿಸ್ತಾನದ ಹಿತೈಷಿಗಳು- ಮತ್ತೆ ಪ್ರಧಾನಿ ಮೋದಿ ದ್ವೇಷ ಭಾಷಣ

Date:

Advertisements

ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಮತ್ತೆ ತಮ್ಮ ದ್ವೇಷ ಭಾಷಣವನ್ನು ಮುಂದುವರೆಸಿದ್ದಾರೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷವನ್ನು ‘ಪಾಕಿಸ್ತಾನದ ಹಿತೈಷಿಗಳು’ ಎಂದು ಕರೆದಿದ್ದಾರೆ. “ಈ ಪಕ್ಷಗಳು ಪಾಕಿಸ್ತಾನದ ಪರಮಾಣು ಶಕ್ತಿಯ ಬಗ್ಗೆ ಮಾತನಾಡುತ್ತಾ ಭಾರತದವನ್ನು ಹೆದರಿಸುತ್ತಿವೆ” ಎಂದು ಮೋದಿ ಆರೋಪಿಸಿದ್ದಾರೆ.

“ಒಂದು ಕಾಲದಲ್ಲಿ ನಮ್ಮತ್ತ ಕಣ್ಣು ಹಾಯಿಸುತ್ತಿದ್ದ ಪಾಕಿಸ್ತಾನ ಮುಗಿದಿದೆ. ಆದರೆ, ಅದರ ಬಗ್ಗೆ ಸಹಾನುಭೂತಿ ಹೊಂದಿರುವ ಎಸ್‌ಪಿ ಮತ್ತು ಕಾಂಗ್ರೆಸ್ ದೇಶವನ್ನು ಹೆದರಿಸುವಲ್ಲಿ ನಿರತವಾಗಿವೆ” ಎಂದು ಹೇಳಿದ್ದಾರೆ.

“ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬ ಕಾರಣಕ್ಕೆ ಭಯಪಡಬೇಕು ಎಂದು ಅವರು ಹೇಳುತ್ತಾರೆ. 56 ಇಂಚಿನ (ಎದೆ) ಏನೆಂದು ಅವರಿಗೆ ತಿಳಿದಿಲ್ಲವೇ? ಇದು ದುರ್ಬಲ ಕಾಂಗ್ರೆಸ್ ಸರ್ಕಾರವಲ್ಲ. ಮೋದಿಯ ಪ್ರಬಲ ಸರ್ಕಾರ” ಎಂದು ಮೋದಿ ಹೇಳಿದ್ದಾರೆ.

Advertisements

ಅದೇ ಇರಲಿ, 1965 ಮತ್ತು 1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧ ನಡೆದಾಗ ಕಾಂಗ್ರೆಸ್‌ ಸರ್ಕಾರವೇ ಅಧಿಕಾರದಲ್ಲಿತ್ತು. ಆ ಯುದ್ಧಗಳನ್ನು ಭಾರತ ಗೆದ್ದಿತ್ತು ಎಂಬುದು ಇಲ್ಲಿ ಸ್ಮರಣೀಯ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X