ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್

Date:

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ 12 ಗಂಟೆಗಳ ಚರ್ಚೆಯ ನಂತರ ಅಂಗೀಕರಿಸಲಾದ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024ರ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.

- Advertisement -

ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಮಸೂದೆಯನ್ನು ಪ್ರಶ್ನಿಸಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸುಪ್ರೀಂ ಕೋರ್ಟ್ ಕದ ತಟ್ಟಲಿದೆ ಎಂದು ರಾಜ್ಯ ಸಭೆಯಲ್ಲಿ ಹೇಳಿದ್ದಾರೆ. ಇದಾದ ಒಂದು ದಿನದ ಬಳಿಕ ಕಾಂಗ್ರೆಸ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. “ಕಾಂಗ್ರೆಸ್ ಶೀಘ್ರದಲ್ಲೇ ವಕ್ಫ್ (ತಿದ್ದುಪಡಿ) ಮಸೂದೆ 2024ರ ಸಾಂವಿಧಾನಿಕತೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ” ಎಂದು ತಿಳಿಸಿದ್ದಾರೆ.

“ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳು, ನಿಬಂಧನೆಗಳು ಮತ್ತು ಪಾಲಿಸುತ್ತಾ ಬಂದಿರುವ ಆಚರಣೆಗಳ ಮೇಲೆ ಮೋದಿ ಸರ್ಕಾರ ನಡೆಸುತ್ತಿರುವ ಎಲ್ಲಾ ದಾಳಿಗಳನ್ನು ನಾವು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಅಂಗೀಕರಿಸಿದ ಪ್ರಮುಖ ಮಸೂದೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಬಗ್ಗೆಯೂ ರಮೇಶ್ ಉಲ್ಲೇಖಿಸಿದ್ದಾರೆ. 2019ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು 2019ರಲ್ಲಿ ಆರ್‌ಟಿಐ ಕಾಯ್ದೆ 2005ರ ತಿದ್ದುಪಡಿಗಳ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಚುನಾವಣಾ ನಿಯಮಗಳ (2024) ತಿದ್ದುಪಡಿಗಳ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಬೇಕಿದೆ. ಮಸೂದೆ ಪರ ಮತ್ತು ವಿರುದ್ಧ ತೀವ್ರ ಚರ್ಚೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...