ಭಾರತ್‌ ಜೋಡೋಗೆ ಒಂದು ವರ್ಷ: ಸೆ.07ರಂದು ದೇಶಾದ್ಯಂತ ಜಿಲ್ಲಾ ಮಟ್ಟದ ಯಾತ್ರೆ

Date:

Advertisements

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ದೇಶಾದ್ಯಂತ ಜಿಲ್ಲಾಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ತೀರ್ಮಾನಿಸಿದೆ.

2023ರ ಸೆಪ್ಟೆಂಬರ್ 7 ರಂದು ದೇಶದ ಎಲ್ಲ ಜಿಲ್ಲೆಯಲ್ಲಿ ಭಾರತ್ ಜೋಡೊ ಯಾತ್ರೆ ಆಯೋಜಿಸಲು ಕಾಂಗ್ರೆಸ್ ಯೋಜಿಸಿದೆ. ಯಾತ್ರೆಯ ವರ್ಷಾಚರಣೆ ಪ್ರಯುಕ್ತ ಕಾಂಗ್ರೆಸ್ ವಿಶೇಷ ಯಾತ್ರೆ ಹಮ್ಮಿಕೊಂಡಿದೆ. ಸೆ. 7 ರಂದು ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಎಲ್ಲ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 7 ರಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದರು. 130 ದಿನಗಳ ಅಭೂತಪೂರ್ವ ಯಾತ್ರೆಯಲ್ಲಿ 12 ರಾಜ್ಯಗಳಲ್ಲಿ ಹಾದು ಹೋಗಿತ್ತು. ಕನ್ಯಾಕುಮಾರಿಯಿಂದ ಆರಂಭಗೊಂಡು, ಕಾಶ್ಮೀರದಲ್ಲಿ ಅಂತ್ಯಗೊಂಡಿತ್ತು. ಜನವರಿ 30, 2023ರವರೆಗೆ ಈ ಯಾತ್ರೆ ನಡೆದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ‘ಒಂದು ರಾಷ್ಟ್ರ, ಒಂದು ಚುನಾವಣೆ’| ದೇಶದ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ: ರಾಹುಲ್ ಗಾಂಧಿ

ಇನ್ನು ಎರಡನೇ ಆವೃತ್ತಿಯ ಭಾರತ ಒಗ್ಗೂಡಿಸುವ ಯಾತ್ರೆಯನ್ನು ಕಾಂಗ್ರೆಸ್ ಶೀಘ್ರದಲ್ಲೇ ಆರಂಭಿಸಲು ತಯಾರಿ ನಡೆಸುತ್ತಿದೆ. ಈ ಯಾತ್ರೆ ಗುಜರಾತ್‌ನಿಂದ ಆರಂಭಗೊಳ್ಳಲಿದ್ದು, ಮೆಘಾಲಯ,  ಮಣಿಪುರ , ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ಸಂಚರಿಸಲಿ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಇತ್ತೀಚಿಗೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X