ಪರಮೇಶ್ವರ್ ಮೂಗಿಗೆ ಮತ್ತೆ ತುಪ್ಪ ಸವರುವ ಕೆಲಸ ನಡೆಯುತ್ತಿದೆ: ಸಿ ಎನ್ ಅಶ್ವತ್ಥ ನಾರಾಯಣ

Date:

Advertisements

ಕಾಂಗ್ರೆಸ್‌ನವರು ಅಧಿಕಾರದ ದಾಹದಲ್ಲಿ ಮುಳುಗಿದ್ದಾರೆ. ನೋಡುತ್ತಿರಿ, ಈ ಕಾಂಗ್ರೆಸಿಗರಿಂದಲೇ ಸರ್ಕಾರ ಪತನವಾಗಲಿದೆ ಎಂದು ಮಾಜಿ ಡಿಸಿಎಂ ಸಿ ಎನ್ ಅಶ್ವತ್ಥ ನಾರಾಯಣ ಭವಿಷ್ಯ ನುಡಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನವರು ತಾವೇ ಮಾಡಿಕೊಂಡ ತಪ್ಪನ್ನು ಬಿಜೆಪಿ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದರು.

“ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ನಯಾ ಪೈಸೆ ಅಭಿವೃದ್ಧಿ ಆಗಿಲ್ಲ. ಸಿಎಂ, ಡಿಸಿಎಂ ತಮ್ಮ ತಮ್ಮ ಗುಂಪುಗಳಲ್ಲಿ ಮುಳುಗಿದ್ದಾರೆ. ಅನೇಕ ಸಭೆ ಮಾಡುತ್ತಿದ್ದಾರೆ. ದುಬೈ ಹೋಗೋದು, ಹೊಸ ಕಾರ್ ಖರೀದಿ ಮಾಡೋದು, ಕಚೇರಿ ನವೀಕರಣ ಮಾಡೋದು ಹೊರತಾಗಿ ನಯಾ ಪೈಸೆ ಅಭಿವೃದ್ಧಿ ಆಗಿಲ್ಲ” ಎಂದು ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ: ರಮೇಶ್‌ ಜಾರಕಿಹೊಳಿ

ಪರಮೇಶ್ವರ್ ಮೂಗಿಗೆ ಮತ್ತೆ ತುಪ್ಪ ಸವರುವ ಕೆಲಸ ನಡೆಯುತ್ತಿದೆ. ಡಿಕೆಶಿಗೆ ಟಕ್ಕರ್ ಕೊಡಲು ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಸಭೆ ಆಯೋಜಿಸಿದ್ದಾರೆ. ಈ ಮೊದಲು ಪರಮೇಶ್ವರ್ ಅವರು ಸಿಎಂ ಸ್ಥಾನ ಕೇಳಿರಲಿಲ್ಲ. ಸಿದ್ದರಾಮಯ್ಯ ಸಿಎಂ ಇದ್ದಾಗ ನನ್ನ ಉಪಮುಖ್ಯಮಂತ್ರಿ ಮಾಡಿ ಅಂತ ಗೋಗರೆದಿದ್ದರು. ಅವರನ್ನು ಮೊದಲು ಡಿಸಿಎಂ ಮಾಡಲೇ ಇಲ್ಲ. ತುಂಬಾ ಗೋಗರೆದ ನಂತರ ಡಿಸಿಎಂ ಮಾಡಿದ್ದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X