ದೆಹಲಿ ಚುನಾವಣೆ | ಆಪ್, ಕೇಜ್ರಿವಾಲ್ ಸೋಲನ್ನು ಸಂಭ್ರಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು!

Date:

Advertisements

ದೆಹಲಿಯ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೇ, 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ.

ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ ಸೋಲು ಕಂಡಿದೆ. ಚುನಾವಣೆಯಲ್ಲಿ ಎಎಪಿಯನ್ನು ಮುನ್ನಡೆಸುತ್ತಿದ್ದ ಘಟಾನುಘಟಿ ನಾಯಕರಾದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವಾರು ಪ್ರಮುಖ ನಾಯಕರು ಸೋಲುಂಡಿದ್ದಾರೆ.

ಆಮ್ ಆದ್ಮಿ ಪಕ್ಷ, ಅರವಿಂದ್ ಕೇಜ್ರಿವಾಲ್‌ಗೆ ಅವರು ಸೋಲು ಕಂಡಿರುವುದನ್ನು ಬಿಜೆಪಿ ಕಾರ್ಯಕರ್ತರಿಗಿಂತಲೂ ಕಾಂಗ್ರೆಸ್ ಕಾರ್ಯಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಿಸುತ್ತಿದ್ದಾರೆ.

Advertisements

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ ಅಧಿಕಾರಕ್ಕೆ ಬಂದಿದ್ದ ಕೇಜ್ರಿವಾಲ್‌ ತನ್ನಷ್ಟಕ್ಕೇ ತಾನೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಅವರಿಗೆ ದೆಹಲಿಯ ಜನತೆ ವರ್ಷಗಳ ಬಳಿಕ ಸರಿಯಾದ ಪಾಠ ಕಳಿಸಿದ್ದಾರೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಜೊತೆಗೆ, ಶೀಲಾ ದೀಕ್ಷಿತ್ ಅವರನ್ನು ನವದೆಹಲಿಯಿಂದ ಕ್ಷೇತ್ರದಿಂದ ಸೋಲಿಸಿದ್ದಕ್ಕೆ ಇದು ಜನರೇ ನೀಡಿರುವ ಪ್ರತೀಕಾರ ಎಂದು ಉಲ್ಲೇಖಿಸುತ್ತಿದ್ದಾರೆ.

‘ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ’ ಎಂದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿ ಸ್ಪರ್ಧೆ ಮಾಡಿರುವುದು ಬಿಜೆಪಿಯ ಮುನ್ನಡೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಇದೇ ವಿಷಯವನ್ನು ಪರೋಕ್ಷವಾಗಿ ಉಲ್ಲೇಖಿಸಿ ಎರಡೂ ಪಕ್ಷಗಳ ವಿರುದ್ದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಉಮರ್ ಅಬ್ದುಲ್ಲಾ, “ನೀವು ಪರಸ್ಪರ ಜಗಳವಾಡುತ್ತಿರಿ” ಎಂದಿದ್ದಾರೆ. “ಔರ್ ಲಡೋ, ಜೀ ಭರ್ ಕೆ ಲಡೋ, ಸಮಾಪ್ತ್ ಕರ್‌ ದೋ ಏಕ್ ದೂಸ್ರೆ ಕೋ” (ಇನ್ನೂ ಸ್ವಲ್ಪ ಜಗಳವಾಡಿ, ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ) ಎಂದು ಮುನಿಯೊಬ್ಬರು ಹೇಳಲಾಗುವ ಜಿಫ್ (GIF)ಒಂದನ್ನು ಒಮರ್ ಅಬ್ದುಲ್ಲಾ ಬರೆದುಕೊಂಡಿದ್ದಾರೆ. ಈ ಮೂಲಕ ಎಎಪಿ, ಕಾಂಗ್ರೆಸ್‌ನ ಕಿತ್ತಾಟದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X