ಸಾಕ್ಷ್ಯ ನಾಶಕ್ಕೆ ಸಂಚು, ಮುಡಾ ಆಯುಕ್ತರನ್ನು ಮೊದಲು ಬಂಧಿಸಿ: ಕುಮಾರಸ್ವಾಮಿ ಒತ್ತಾಯ

Date:

ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

- Advertisement -

ಜೆಡಿಎಸ್ ಪಕ್ಷದ ಕಚೇರಿ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ” ಎಂದು ಆರೋಪ ಮಾಡಿದರು.

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು; “ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ” ಎಂದು ಕುಮಾರಸ್ವಾಮಿ ದೂರಿದರು.

“ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮುಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು” ಎಂದು ಕೇಂದ್ರ ಸಚಿವರು ಆಗ್ರಹಿಸಿದರು.

“ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...