ಸೆ.5ರಂದು ಶಾಲೆಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಾರ್ಯಕ್ರಮಕ್ಕೆ ಚಾಲನೆ: ಸಚಿವ ಮಧು ಬಂಗಾರಪ್ಪ

Date:

Advertisements
  • ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳಿಂದ ಸಂವಿಧಾನದ ಓದು
  • ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ: ಮಧು

ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಧಾರವಾಡದಲ್ಲಿ ಬೆಂಗಳೂರಿನ ಇಕೋ ವಾಚ್ ಸಂಘಟನೆ, ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಬಾಲ ಬಳಗ ಸೃಜನಶೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ನಡಿಗೆ ಹಸಿರಿನ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಸಂವಿಧಾನ ಓದು ಕಾರ್ಯಕ್ರಮಕ್ಕೆ ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ದೇಶದಲ್ಲಿನ ಪ್ರಜೆಗಳೆಲ್ಲರೂ ಅನ್ಯೂನ್ಯವಾಗಿ ಬಾಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂಬುದು ಈ ಕಾರ್ಯಕ್ರಮದ ಆಶಯ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ. ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಬಿಸಿಯೂಟ ಸೇವನೆ ನಂತರ ಮಕ್ಕಳು ಗಿಡದ ಬುಡದಲ್ಲಿ ತಟ್ಟೆ ತೊಳೆಯುವಂತೆ ಉದ್ದೇಶಿಸಲಾಗಿದೆ” ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಬಗೆಹರಿದಿಲ್ಲ. ಕೆಲವೆಡೆ ಶಾಲಾ ಕಟ್ಟಡ ಸಮಸ್ಯೆ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳು ಇವೆ. ಎರಡು ವರ್ಷದಲ್ಲಿ ಎಲ್ಲ ಸಮಸ್ಯೆ ಪರಿಹರಿಸುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X