ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲು ಮಸೂದೆ: ರಾಷ್ಟ್ರಪತಿಯವರಿಗೆ ಹೊತ್ತು ಹಾಕಿದ ರಾಜ್ಯಪಾಲರು

Date:

Advertisements

ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಸೂದೆ ಕಾಗದದಲ್ಲಿ ಉಳಿಯುವುದೇ ಎಂಬ ಪ್ರಶ್ನೆ ಮೂಡಿದೆ.

ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಸೂದೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ರಾಷ್ಟ್ರಪತಿಯವರ ಅಂಕಿತಕ್ಕೆ ಹೊತ್ತು ಹಾಕಿದ್ದಾರೆ.

ರಾಷ್ಟ್ರಪತಿಯವರ ಅಂಕಿತ ಪಡೆಯುವಂತೆ ಸೂಚಿಸಿ ಈ ಮಸೂದೆಯ ಕಡತವನ್ನು ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮಸೂದೆಯನ್ನು ವಿಧಾನಮಂಡಲದಲ್ಲಿ ಪಾಸು ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳಿಸಿತ್ತು.

Advertisements

ಪ್ರಧಾನಿ ಮೋದಿಯವರೂ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ ಬಿಜೆಪಿಯು ಇತ್ತೀಚೆಗೆ ರಾಜ್ಯಾದ್ಯಂತ ನಡೆಸಿದ ಜನಾಕ್ರೋಶ ಯಾತ್ರೆಯಲ್ಲಿಯೂ ಈ ಮೀಸಲಾತಿ ಕ್ರಮವನ್ನು ಪ್ರಧಾನವಾಗಿ ಎತ್ತಿ ಟೀಕೆ ಮಾಡಿತ್ತು.

ಇತ್ತೀಚಿನ ಸುಪ್ರೀಮ್ ಕೋರ್ಟ್ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಅಂಕಿತಕ್ಕಾಗಿ ಕಳಿಸಿದ ಮಸೂದೆಯನ್ನು ರಾಜ್ಯಪಾಲರು ಅನಿರ್ದಿಷ್ಟಾವಧಿ ಬಾಕಿ ಇಟ್ಟುಕೊಳ್ಳುವಂತಿಲ್ಲ. ತಮಗೆ ಒಪ್ಪಿಗೆಯಿಲ್ಲದಿದ್ದರೆ ರಾಷ್ಟ್ರಪತಿಯವರಿಗೆ ಕಳಿಸಿಕೊಡಬೇಕು. ರಾಷ್ಟ್ರಪತಿಯವರು ಕೂಡ ಇಂತಿಷ್ಟು ಅವಧಿಯೊಳಗಾಗಿ ತಮ್ಮ ಒಪ್ಪಿಗೆ ಅಥವಾ ಅಸಮ್ಮತಿ ಸೂಚಿಸಬೇಕಿದೆ.

ಕೇಂದ್ರ ಬಿಜೆಪಿ ಸರ್ಕಾರದ ಪ್ರಕಟಿತ ಮುಸ್ಲಿಮ್ ವಿರೋಧಿ ನೀತಿಯ ಹಿನ್ನೆಲೆಯಲ್ಲಿ ಈ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ದೊರೆಯುವುದು ದುಸ್ಸಾಧ್ಯವೇ ಸರಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X