ವಿವಾದಾತ್ಮಕ ಹೇಳಿಕೆ | ಬಂಧನ ಭೀತಿಯ ನಡುವೆ ಹೈಕೋರ್ಟ್‌ ಮೆಟ್ಟಿಲೇರಿದ ನಟ ಉಪೇಂದ್ರ

Date:

Advertisements

ವಿವಾದಾತ್ಮಕ ಹೇಳಿಕೆ ನೀಡಿ ಬಂಧನ ಭೀತಿ ಎದುರಿಸುತ್ತಿರುವ ನಟ ಉಪೇಂದ್ರ, ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಉಪೇಂದ್ರ ಅವರ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ಪ್ರತ್ಯೇಕ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ಮೊದಲ ಎಫ್ಐಆರ್ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಆಗಿದ್ದರೆ, ಎರಡನೇ ಎಫ್‌ಐಆರ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಮೊದಲ ದೂರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದರೆ, ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಅವರು ಎರಡನೇ ದೂರು ನೀಡಿದ್ದಾರೆ.

Advertisements

ವಿವಾದಾತ್ಮಕ ಹೇಳಿಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ತಕ್ಷಣ ಉಪೇಂದ್ರ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಜೊತೆಗೆ, ವಾಟ್ಸಪ್‌ನಲ್ಲೂ ಕೂಡ ಕಳುಹಿಸಿ, ಉತ್ತರ ನೀಡುವಂತೆ ಸೂಚಿಸಿದ್ದರು. ಆದರೆ ಅದಕ್ಕೆ ಉಪೇಂದ್ರ ಅವರು ಉತ್ತರಿಸಿಲ್ಲ ಎಂದು ತಿಳಿದುಬಂದಿದೆ.

ಅಲ್ಲದೆ, ವಿವಿಪುರಂ ವಿಭಾಗದ ಎಸಿಪಿ ನಾಗರಾಜ್​ ಅವರ ನೇತೃತ್ವದ ಪೊಲೀಸರ ತಂಡವು ಕತ್ರಿಗುಪ್ಪೆಯಲ್ಲಿರುವ ಉಪೇಂದ್ರ ಅವರ ನಿವಾಸಕ್ಕೆ ತೆರಳಿ ಸ್ಥಳ ಮಹಜರು ಕೂಡ ನಡೆಸಿದ್ದಾರೆ.

‘ಉಪೇಂದ್ರ ಅವರು ಮನೆಯಲ್ಲಿರಲಿಲ್ಲ. ಅವರು ನಾಪತ್ತೆಯಾಗಿರುವುದಾಗಿ’ ಪೊಲೀಸರೊಂದಿಗೆ ಸ್ಥಳ ಮಹಜರಿಗೆ ತೆರಳಿದ್ದ ದೂರುದಾರರಲ್ಲೋರ್ವರಾದ ಸಮತಾ ಸೈನಿಕ ದಳದ ಗೋಪಾಲ ಗಿರಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಹೊಲೆಗೇರಿ’ ಹೇಳಿಕೆ | ನಟ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್, ವಿಚಾರಣೆಗೆ ಹಾಜರಾಗಲು ನೋಟಿಸ್

ಈ ನಡುವೆ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ತಾನು ಉದ್ದೇಶಪೂರ್ವಕವಾಗಿ ಯಾರಿಗೂ ನೋವನ್ನುಂಟು ಮಾಡುವಂತೆ ಮಾತನಾಡಿಲ್ಲ. ಗಾದೆ ಮಾತನ್ನು ಉಲ್ಲೇಖಿಸುವ ಸಂದರ್ಭದಲ್ಲಿ ಆ ಮಾತು ಬಂದಿದೆ. ಹೇಳಿಕೆ ತಪ್ಪಾಗಿದೆ ಅಂತ ತಿಳಿದ ಕೂಡಲೇ ಕ್ಷಮೆ ಕೇಳಿದ್ದೇನೆ ಹಾಗೂ ವಿಡಿಯೋ ಡಿಲೀಟ್ ಕೂಡ ಮಾಡಿದ್ದೇನೆ. ಎಲ್ಲ ಸಮುದಾಯದ ಬಗ್ಗೆ ಗೌರವಿಟ್ಟುಕೊಂಡಿರುವ ವ್ಯಕ್ತಿ ನಾನು’ ಎಂದು ಹೈಕೋರ್ಟಿಗೆ ಈಗಾಗಲೇ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X