ಶಾಸಕ ತೇಜ್ ಪ್ರತಾಪ್ ಯಾದವ್ ಆಜ್ಞೆಯಂತೆ ಕುಣಿದ ಕಾನ್‌ಸ್ಟೆಬಲ್ ಅಮಾನತು

Date:

Advertisements

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಒಬ್ಬರನ್ನು ಕುಣಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಆಜ್ಞೆಯಂತೆ ಕುಣಿದ ಬಿಹಾರ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ತೇಜ್ ಪ್ರತಾಪ್ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಶುಕ್ರವಾರ ಪಾಟ್ನಾದಲ್ಲಿರುವ ತೇಜ್ ಪ್ರತಾಪ್ ಅವರ ನಿವಾಸದಲ್ಲಿ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗೆ ಕುಣಿಯುವಂತೆ ತಿಳಿಸಿರುವುದು ವಿಡಿಯೋದಲ್ಲಿ ಕಾಣಬಹುದು. ಸದ್ಯ ತೇಜ್ ಪ್ರತಾಪ್ ನಡೆಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಇದು ತಮಾಷೆ ಎಂದು ಹೇಳಿದರೆ, ಇನ್ನು ಕೆಲವರು ಇದು ದರ್ಪ ಎಂದಿದ್ದಾರೆ.

ಇದನ್ನು ಓದಿದ್ದೀರಾ? ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ: ಪೊಲೀಸ್ ಅಧಿಕಾರಿಯನ್ನು ಕುಣಿಸಿದ ತೇಜ್ ಪ್ರತಾಪ್ ಯಾದವ್

Advertisements

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಜ್ ಪ್ರತಾಪ್ ಅವರ ಭದ್ರತಾ ಸಿಬ್ಬಂದಿಯನ್ನು ಅವರ ಸೇವೆಯಿಂದ ತೆಗೆದುಹಾಕಲಾಗಿದ್ದು, ಪೊಲೀಸ್ ಲೇನ್‌ಗೆ ವರ್ಗಾಯಿಸಲಾಗಿದೆ. ಬೇರೊಬ್ಬ ಕಾನ್‌ಸ್ಟೆಬಲ್‌ ಅನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ಬಗ್ಗೆ ಎಸ್‌ಎಸ್‌ಪಿ ಆದೇಶ ನೀಡಿದ್ದಾರೆ. “ಶಾಸಕ ತೇಜ್ ಪ್ರತಾಪ್ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಭದ್ರತಾ ಸಿಬ್ಬಂದಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸೇವಾ ವಸ್ತ್ರದಲ್ಲಿ ಕುಣಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಾಗಿದೆ. ಶಾಸಕರಿಗೆ ಬೇರೋರ್ವರನ್ನು ಭದ್ರತಾ ಸಿಬ್ಬಂದಿಯಾಗಿ ನಿಯೋಜಿಸಲಾಗುವುದು” ಎಂದು ತಿಳಿಸಲಾಗಿದೆ.

“ಸಿಪಾಯಿ ನಾವೊಂದು ಹಾಡು ಹಾಕುತ್ತೇವೆ. ಅದಕ್ಕೆ ನೀವು ಕುಣಿಯಬೇಕು. ತಪ್ಪು ತಿಳಿಯಬೇಡಿ, ಇದು ಹೋಳಿ ಆಚರಣೆ ಸಂದರ್ಭ ಕುಣಿಯಿರಿ. ನೀವು ಕುಣಿಯದಿದ್ದರೆ ಅಮಾನತು ಮಾಡಿಸುತ್ತೇನೆ” ಎಂದು ಹೇಳಿದ್ದಾರೆ. ಹಾಗೆಯೇ ತಪ್ಪು ತಿಳಿಯಬೇಡಿ ಇದು ಹೋಳಿ ಎಂದು ಮತ್ತೆ ಪುನರುಚ್ಚರಿಸಿದ್ದಾರೆ. ತೇಜ್ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮೊದಲು ಈ ಹುಡುಗ ತೇಜ ಪ್ರತಾಪನನ್ನು ಮನೆಗೆ ಕಳಿಸಬೇಕು. ಹುಡುಗಾಟ ಆಡಿದ್ದಾನೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X