ಬೇಲೂರು ಜೆಡಿಎಸ್‌ ಶಾಸಕ ಎಸ್‌ ಲಿಂಗೇಶ್‌ ವಿರುದ್ಧ ದೂರು ದಾಖಲಿಸುವಂತೆ ಕೋರ್ಟ್‌ ಆದೇಶ

Date:

  • ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ
  • ಜು.7ರೊಳಗೆ ವರದಿ ಸಲ್ಲಿಸುವಂತೆ ಬೇಲೂರು ಠಾಣಾಧಿಕಾರಿಗೆ ನಿರ್ದೇಶನ

ಭೂ ಮಂಜೂರಾತಿ ವೇಳೆ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಕೆ ಎಸ್‌ ಲಿಂಗೇಶ್‌ ಮೇಲೆ ಎಫ್‌ಐಆರ್‌ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ಹೊರಡಿಸಿದೆ.

ಬೇಲೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ 2,750 ಎಕರೆ 86 ಗುಂಟೆ ಸರ್ಕಾರಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಬಲಾಢ್ಯರಿಗೆ, ಅನರ್ಹರಿಗೆ, ಅಪ್ರಾಪ್ತರಿಗೆ ಹಾಗೂ ಬೆಂಗಳೂರಿನ ರಿಯಲ್‌ ಎಸ್ಟೇಟ್ ವ್ಯಕ್ತಿಗಳಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಗಾಂಧಿ ನಗರ ನಿವಾಸಿ ಕೆ ಸಿ ರಾಜಣ್ಣ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಾಸಕ ಕೆ ಎಸ್‌ ಲಿಂಗೇಶ್‌ ಹಾಗೂ ಇತರೆ 15 ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಖಾಸಗಿ ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ದಹಿ ವಿವಾದ | ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವ ʼಭಂಡ ಬಾಳುʼ ಬಿಜೆಪಿಗೆ ಮಾತ್ರ ಸಾಧ್ಯ: ಕಾಂಗ್ರೆಸ್‌ ಕಿಡಿ

ರಾಜ್ಯದ ಶಾಸಕರು ಹಾಗೂ ಸಂಸದರ ವಿರುದ್ಧ ನಡೆಯುವ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಯುವ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ನ್ಯಾಯಾಧೀಶೆ ಜೆ ಪ್ರೀತ್‌ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದರು.

ಕೋಲಾರದ ವ್ಯಕ್ತಿಯ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು ಶಾಸಕರ ಮೇಲೆ ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 156 (3)ರ ಅಡಿಯಲ್ಲಿ ತನಿಖೆ ನಡೆಸಿ, ಎಲ್ಲ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 468, 465, 464, 420, 471, 120 ಬಿ ಹಾಗೂ 409ರ ಅನ್ವಯ ಕಾನೂನು ಕ್ರಮ ಜರುಗಿಸಿ, ಇದೇ ವರ್ಷದ ಜುಲೈ 7ರ ಒಳಗೆ ವರದಿ ಸಲ್ಲಿಸುವಂತೆ ಬೇಲೂರು ಪೊಲೀಸ್ ಠಾಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...