ಅಲ್ಪಸಂಖ್ಯಾತರು ಭಯಭೀತರಾಗಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ: ನಿವೃತ್ತ ನ್ಯಾ. ಅಜಿತ್ ಪ್ರಕಾಶ್ ಶಾ

Date:

Advertisements
  • ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ
  • ಬುಲ್ಡೋಝರ್ ರಾಜಕೀಯ ಇಂದು ಅಧಿಕಾರದ ಸಂಕೇತವಾಗಿ ಮಾರ್ಪಾಡಾಗಿದೆ

ದೇಶದಲ್ಲಿ ಕೋಮುವಾದಿ ಶಕ್ತಿಗಳ ಹೆಚ್ಚಳದ ಮಧ್ಯೆ ಅಲ್ಪಸಂಖ್ಯಾತರು ಭಯದಲ್ಲಿ ಉಳಿದಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ ಎಂದು ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅಭಿಪ್ರಾಯಿಸಿದ್ದಾರೆ.

ಭಾರತದಲ್ಲಿ ನ್ಯಾಯಾಲಯಗಳಂತಹ ಔಪಚಾರಿಕ ಸಂಸ್ಥೆಗಳು ದುರ್ಬಲಗೊಳ್ಳುತ್ತಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿರುವ ನಿವೃತ್ತ ನ್ಯಾಯಮೂರ್ತಿ, ದೇಶದಲ್ಲಿ ಇತ್ತೀಚೆಗೆ ‘ಉಗ್ರವಾದ ಮತ್ತು ಕೋಮುವಾದಿ’ ಶಕ್ತಿಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಅಲ್ಪಸಂಖ್ಯಾತರು ಭಯಭೀತರಾಗಿದ್ದಾರೆ. ದ್ವೇಷದ ಸಂಸ್ಕೃತಿ ಹೆಚ್ಚಳವಾಗುತ್ತಿದೆ. ಆದರೂ ನ್ಯಾಯಾಲಯಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಮೂಕ ಪ್ರೇಕ್ಷಕರಾಗಿದೆ’ ಎಂದು ಎ ಪಿ ಶಾ ಅಭಿಪ್ರಾಯಿಸಿದ್ದಾರೆ.

Advertisements

“ಹರಿದ್ವಾರ, ಹರಿಯಾಣ ಅಥವಾ ಇತರೆಡೆಗಳಲ್ಲಿ ಬಹುಸಂಖ್ಯಾತರು ಇತರರನ್ನು, ಅದರಲ್ಲೂ ವಿಶೇಷವಾಗಿ ಮುಸ್ಲಿಮರನ್ನು ಶತ್ರುಗಳೆಂದು ಭಾವಿಸುವಂತೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ಭಾವನೆ ದೇಶದಾದ್ಯಂತ ಹರಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಎನ್‌ಕೌಂಟರ್ ಹತ್ಯೆ, ಅಲ್ಪಸಂಖ್ಯಾತ ಸಮುದಾಯದ ವ್ಯಾಪಾರಿಗಳ ಮೇಲೆ ಪಂಚಾಯತ್ ನಿಷೇಧ ಹೇರಿಕೆ ಮತ್ತು ‘ಬುಲ್ಡೋಝರ್ ರಾಜಕೀಯ’ದಂತಹ ಕಾನೂನುಬಾಹಿರ ಸಾಧನಗಳು ಈ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ ಎಂದು ನಿವೃತ್ತ ನ್ಯಾಯಮೂರ್ತಿ ಬೇಸರಿಸಿದ್ದಾರೆ.

“ಬುಲ್ಡೋಝರ್ ಇಂದು ಅಧಿಕಾರದ ಸಂಕೇತವಾಗಿ ಮಾರ್ಪಾಡಾಗಿದೆ. ಯಾವುದೇ ಕಾನೂನಿನ ಅನುಮತಿ ಅಥವಾ ಅಧಿಕಾರ ವ್ಯಾಪ್ತಿ ಇಲ್ಲದೇಯೇ ಬುಲ್ಡೋಝರ್ ಅನ್ನು ಬಳಸಲಾಗುತ್ತಿದೆ. ಹಲವಾರು ಮುಗ್ಧ ಜೀವಗಳು, ಜೀವನವನ್ನು ಕಳೆದುಕೊಂಡಿವೆ. ಅವರಿಗೆ ಚೇತರಿಸಿಕೊಳ್ಳಲು ಯಾವುದೇ ಅವಕಾಶ ನೀಡಲಾಗುತ್ತಿಲ್ಲ” ಎಂದು ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X