ಕೋವಿಡ್ ಭ್ರಷ್ಟಾಚಾರ | ಯತ್ನಾಳ್‌ಗೆ ಸರ್ಕಾರದಿಂದ ನೋಟಿಸ್‌ ನೀಡಿ ಮಾಹಿತಿ ಕೇಳುತ್ತೇವೆ: ದಿನೇಶ್ ಗುಂಡೂರಾವ್

Date:

Advertisements

ಬಿಜೆಪಿ ಸರ್ಕಾರದ ಅವಧಿಯಲ್ಲಿ ₹40 ಸಾವಿರ ಕೋಟಿ ಕೋವಿಡ್ ಹಗರಣ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇವಲ ಬಾಯಿ ಮಾತಲ್ಲಿ ಹೇಳಿದರೆ ಸಾಲದು. ತಮ್ಮ ಬಳಿ ಇರುವ ಮಾಹಿತಿ ಹಾಗೂ ದಾಖಲೆಗಳನ್ನ ಜಸ್ಟಿಸ್ ಕುನ್ಹಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೋವಿಡ್ ಅಕ್ರಮಗಳ ಕುರಿತು ಯತ್ನಾಳ್ ಅವರ ಹೇಳಿಕೆ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, “ಯತ್ನಾಳ್ ಅವರು ಹೇಳುತ್ತಿರುವುದರಲ್ಲಿ ಸತ್ಯ ಇದೆ. ಬಿಜೆಪಿ ಪಕ್ಷದ ಶಾಸಕರಾಗಿ ಆ ಪಕ್ಷದ ನಾಯಕರ ಮೇಲೆ ಯತ್ನಾಳ್ ಅವರು ₹40 ಸಾವಿರ ಕೋಟಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ಯಾರೂ ಕೂಡ ಬಸನಗೌಡ ಯತ್ನಾಳ್ ಅವರಿಗೆ ಒಂದು ನೋಟಿಸ್ ಕೂಡ ನೀಡುವುದಿಲ್ಲ. ಶಿಸ್ತು ಕ್ರಮ ಜರುಗಿಸುವ ಬಗ್ಗೆ ಬಿಜೆಪಿಯ ಯಾವೊಬ್ಬ ಹಿರಿಯ ನಾಯಕರಿಗೂ ಧೈರ್ಯ ಇಲ್ಲ” ಎಂದರು.

“ಜಸ್ಟಿಸ್ ಕುನ್ಹಾ ಅವರ ತನಿಖಾ ಆಯೋಗ ಸ್ವಯಂಪ್ರೇರಿತವಾಗಿ ಯತ್ನಾಳ್ ಅವರಿಂದ ಮಾಹಿತಿ ಪಡೆಯಬಹುದು. ಅಥವಾ ಯತ್ನಾಳ್ ಅವರು ತಮ್ಮ ಬಳಿ ಇರುವ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿದರೆ ಅದನ್ನ ತನಿಖಾ ಆಯೋಗಕ್ಕೆ ಸರ್ಕಾರವೇ ಸಲ್ಲಿಸಲಿದೆ. ₹40 ಸಾವಿರ ಕೋಟಿ ಭ್ರಷ್ಟಾಚಾರದ ಬಗ್ಗೆ ಮಾತಾಡಿರುವ ಯತ್ನಾಳ್ ಅವರಿಗೆ ಸರ್ಕಾರದಿಂದ ಕೂಡ ಯತ್ನಾಳ್ ಅವರಿಗೆ ನೋಟಿಸ್ ನೀಡಿ ಮಾಹಿತಿ ಒದಗಿಸುವಂತೆ ಕೇಳಲಾಗುವುದು” ಎಂದು ತಿಳಿಸಿದರು.

Advertisements

“ವಿಜಯೇಂದ್ರ ಅವರ ಭ್ರಷ್ಟಾಚಾರದ ಕೆಲವು ದಾಖಲೆಗಳು ಯತ್ನಾಳ್ ಅವರ ಬಳಿ ಇರಬಹುದು. ಹೀಗಾಗಿ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ” ಎಂದು ದಿನೇಶ್ ಗುಂಡೂರಾವ್ ಹೇಳಿದರು.

“ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹಿಂಜರಿಯುತ್ತಿದ್ದಾರೆ. ಯತ್ನಾಳ್ ಅವರ ರೀತಿಯಲ್ಲಿ ಬೇರೆ ಯಾವುದೇ ಪಕ್ಷದಲ್ಲಿ ಹೇಳಿಕೆಗಳನ್ನ ನೀಡಿದ್ದರೆ, ನೋಟಿಸ್ ನೀಡಿ ಶಿಸ್ತು ಕ್ರಮ ಜರುಗಿಸಲಾಗುತ್ತಿತ್ತು. ಆದರೆ ಬಿಜೆಪಿ ನಾಯಕರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಎಲ್ಲವನ್ನ ನೋಡಿಕೊಳ್ಳುತ್ತಿದ್ದಿದ್ದು ವಿಜಯೇಂದ್ರ. ವಿಜಯೇಂದ್ರ ಅವರ ಕೆಲವು ದಾಖಲೆಗಳು ಯತ್ನಾಳ್ ಬಳಿ ಇರೋದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳೋಕೆ ಬಿಜೆಪಿಯವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಭ್ರಷ್ಟಾಚಾರದ ಬಗ್ಗೆ ಝೀರೋ ಟಾಲರೆನ್ಸ್ ಎನ್ನುವ ಮೋದಿ ಅವರು ಸುಮ್ಮನಿರೋದು ಏಕೆ?

“ಭ್ರಷ್ಟಾಚಾರ ಸಹಿಸಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದ ಶಾಸಕ ₹40 ಸಾವಿರ ಕೋಟಿ ಅಕ್ರಮದ ಆರೋಪ ಮಾಡಿದರೂ ಮೌನವಾಗಿದ್ದಾರೆ. ಭ್ರಷ್ಟಾಚಾರದಲ್ಲಿ ಪಾಲು ಕೇಂದ್ರಕ್ಕೂ ತಲುಪಿದೆಯಾ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತೆ. ಭ್ರಷ್ಟಾಚಾರದ ಪಾಲು ಕೇಂದ್ರಕ್ಕೆ ಮುಟ್ಟಿರುವ ಹಿನ್ನೆಲೆಯಲ್ಲೇ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಮಾತುಗಳಿವೆ” ಎಂದು ಆರೋಪಿಸಿದರು.

“ಮೊದಲ ಬಾರಿ ಶಾಸಕರಾದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದೆ. ಆದರೆ ರಾಜ್ಯಾಧ್ಯಕ್ಷರ ಮೇಲೆ ಅವರ ಪಕ್ಷದ ಶಾಸಕ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಪಾರ್ಟಿ ಆಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

“ಇ.ಡಿ, ಐಟಿ, ಸಿಬಿಐ ತನಿಖಾ ಸಂಸ್ಥೆಗಳು ಇಂಥ ವಿಚಾರಗಳು ಬಂದಾಗ ಯಾವುದೇ ತನಿಖೆಗಳನ್ನ ಕೈಗೊಳ್ಳಲ್ಲ. ಇದೇ ಕಾಂಗ್ರೆಸ್ ನಾಯಕರ ಮೇಲೆ ಆರೋಪಗಳು ಬಂದಿದ್ದರೆ ಇಷ್ಟರೊಳಗೆ ಐಟಿ ದಾಳಿಗಳು ನಡೆದಿರುತ್ತಿದ್ವು. ಕೇಂದ್ರ ತನಿಖಾ ಸಂಸ್ಥೆಗಳು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡ್ತಿವೆ” ಎಂದು ಅವರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X