ಕೊರೋನಾ ಭ್ರಷ್ಟರ ಬಗ್ಗೆ ತನಿಖಾ ಆಯೋಗಕ್ಕೆ ಯತ್ನಾಳ್ ಮಾಹಿತಿ ನೀಡಲಿ: ದಿನೇಶ್ ಗುಂಡೂರಾವ್

Date:

Advertisements

ಕೋವಿಡ್ ಭ್ರಷ್ಟರ ಮಾಹಿತಿಯನ್ನ ಯತ್ನಾಳ್ ಅವರು, ತಮ್ಮ ಕೇಂದ್ರ ನಾಯಕರಿಗೆ ನೀಡುವ ಬದಲು ಜಸ್ಟಿಸ್ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇತ್ತೀಚೆಗೆ, ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಕೊರೋನಾ ಹಗಣರದ ಬಗ್ಗೆ ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದೇನೆ ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದರು. ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, “ಕೋವಿಡ್‌ನಲ್ಲಿ ಕಾಯಕ ಮರೆತು ಕಳಂಕದ ಕೆಲಸ ಮಾಡಿದ ಭ್ರಷ್ಟರ ಮಾಹಿತಿಯನ್ನ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಕೇಂದ್ರ ನಾಯಕರಿಗೆ ನೀಡಿದರೆ ಏನು ಪ್ರಯೋಜನ” ಎಂದು ಹೇಳಿದ್ದಾರೆ.

“ಕೇಂದ್ರ ನಾಯಕರ ಸಹಕಾರವಿಲ್ಲದೇ 40 ಸಾವಿರ ಕೋಟಿ ಕೋವಿಡ್ ಭ್ರಷ್ಟಾಚಾರ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ನಡೆದಿರುತ್ತಾ. ಕೋವಿಡ್ ಭ್ರಷ್ಟಾಚಾರದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮಲ್ಲಿರುವ ಮಾಹಿತಿ, ದಾಖಲೆಗಳನ್ನ ಕೇಂದ್ರ ನಾಯಕರಿಗೆ ನೀಡುವ ಬದಲು ಜಸ್ಟೀಸ್ ಕುನ್ಹಾ ಅವರ ತನಿಖಾ ಆಯೋಗಕ್ಕೆ ನೀಡಲಿ” ಎಂದಿದ್ದಾರೆ.

Advertisements

“ಬಸವೇಶ್ವರರ ಅನುಯಾಯಿ ಎಂದು ಹೇಳಿಕೊಳ್ಳುವ ಬಸನಗೌಡ ಯತ್ನಾಳ್ ಅವರು ಅಂತರಂಗ ಶುದ್ದಿ ಬಹಿರಂಗ ಶುದ್ದಿ‌ ಎರಡನ್ನೂ ಪಾಲಿಸಬೇಕು. ನಾಲ್ಕು ಗೋಡೆಗಳ ಮಧ್ಯೆ ಕೇಂದ್ರ ನಾಯಕರಿಗಷ್ಟೇ ಮಾಹಿತಿ ನೀಡಿದ್ದೇನೆ ಎಂದರೆ, ಅದರಿಂದ ಪ್ರಯೋಜನವಿಲ್ಲ” ಎಂದು ಹೇಳಿದ್ದಾರೆ.

“ಬಸವಣ್ಣನವರ ವಚನ ಪ್ರಸ್ತಾಪಿಸಿರುವ ಸಚಿವರು, ಕೋವಿಡ್ ವೇಳೆ ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಶ್ರೇಷ್ಠ ಸಂದೇಶವನ್ನ ಪಾಲಿಸಬೇಕಿತ್ತು. ಆದರೆ ಜನರ ಜೀವ ಉಳಿಸಲು ಹೋರಾಟ ನಡೆಯುತ್ತಿದ್ದಾಗ ಬರೀ ಕಳಂಕದ ಕೆಲಸದಲ್ಲಿ ತೊಡಗಿದ್ದು ಅತ್ಯಂತ ಅಮಾನವೀಯ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X