ಸಿ ಪಿ ಯೋಗೇಶ್ವರ್ ಕಾಟಾಚಾರಕ್ಕೆ ಬಿಜೆಪಿ ಜೊತೆ ಇದ್ದರು‌ ಅನ್ನಿಸುತ್ತದೆ: ಆರ್‌ ಅಶೋಕ್‌ ಕಿಡಿ

Date:

Advertisements

ಮಾಜಿ ಸಚಿವ ಸಿ ಪಿ ಯೋಗೇಶ್ವರ್​ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಪ್ರತಿಕ್ರಿಯಿಸಿದ್ದು, “ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟುಕೊಂಂಡವರು. ಕಾಟಾಚಾರಕ್ಕೆ ಬಿಜೆಪಿ ಜೊತೆ ಇದ್ದರು ಅನ್ನಿಸುತ್ತೆ” ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಿ ಪಿ ಯೋಗೇಶ್ವರ್ ಅವರು ಬಿಜೆಪಿಯ ಕಟ್ಟಾಳು ಅಲ್ಲ. ಆದರೂ ​ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಕಾಂಗ್ರೆಸ್‌ ಸೇರಿದ್ದಾರೆ” ಎಂದು ಟೀಕಿಸಿದರು.

“ಯೋಗೇಶ್ವರ್‌ ಅವರು ಕಾಂಗ್ರೆಸ್ ಸೇರಿ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್​ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್​ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು” ಎಂದು ಪ್ರಶ್ನಿಸಿದರು.

Advertisements

“ಸಿ ಪಿ ಯೋಗೇಶ್ವರ್​ ಗುರುತು ಸೈಕಲ್. ಬಿಎಸ್​ಪಿ ಎಲ್ಲ ಮುಗಿಸಿಕೊಂಡು ನಮ್ಮ ಪಕ್ಷಕ್ಕೆ ಬಂದವರು. ಅವರು ಸೈದ್ಧಾಂತಿಕವಾಗಿ ನಮ್ಮ ಪಕ್ಷದಲ್ಲಿ ಇದ್ದವರಲ್ಲ. ಚನ್ನಪಟ್ಟಣದಲ್ಲಿ ಬಿಜೆಪಿ ‌ಮತ ಅಲ್ಲೇ ಇರುತ್ತೆ. ನಾನು, ಪ್ರಲ್ಹಾದ್ ಜೋಶಿ ಅವರು ಜೆಡಿಎಸ್‌ಗೆ ಟಿಕೆಟ್ ಅಂತ ಅವರಿಗೆ ಹೇಳಿದ್ದೇವೆ. ಕುಮಾರಸ್ವಾಮಿ ಅವರು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೇಳಿದ್ದರು. ಆದರೆ, ಸಿ ಪಿ ಯೋಗೇಶ್ವರ್​ ಒಪ್ಪಲಿಲ್ಲ” ಎಂದು ವಿವರಿಸಿದರು.

“ಯೋಗೇಶ್ವರ್‌ ನಡೆ ಪಕ್ಷಕ್ಕೆ ದ್ರೋಹ ಬಗೆದಂತೆ. ರಾಜ್ಯದ ಎಲ್ಲ ಬಿಜೆಪಿ ನಾಯಕರು ಅವರ ಪರವಾಗಿ ಇದ್ದೆವು. ಬಿಜೆಪಿ ಚಿಹ್ನೆ, ಜೆಡಿಎಸ್ ಚಿಹ್ನೆ ಅಂತಲ್ಲ. ಎನ್​ಡಿಎ ಗೆಲ್ಲುವುದು ಮುಖ್ಯ. ಎನ್‌ಡಿಎನಲ್ಲಿ ಅವರಿಗೆ ಸೀನಿಯಾರಿಟಿ ಇತ್ತು. ಈಗ ಹೋಗಿ ಲಾಸ್ಟ್​​ನಲ್ಲಿ ಕೂತಿದ್ದಾರೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X