ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ: ಸಿಪಿಐ(ಎಂ)

Date:

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್‌ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್‌ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) [ಸಿಪಿಐಎಂ] ಹೇಳಿದೆ.

- Advertisement -

ಸಿಪಿಐ(ಎಂ) ಕೂಡ ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಪಡೆದಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತರಿಸಿದ್ದವು. ಈ ಬೆನ್ನಲ್ಲೇ ಸಿಪಿಐ(ಎಂ) ವರದಿಗೆ ಪ್ರತಿಕ್ರಿಯೆ ನೀಡಿದೆ. ಪಕ್ಷವೂ ಚುನಾವಣಾ ಬಾಂಡ್‌ ಮೂಲಕ ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಚುನಾವಣಾ ಬಾಂಡ್‌ ಮೂಲಕ ಹಣ ಪಡೆದಿರುವ ಬಗ್ಗೆ ಮಾಧ್ಯಮಗಳು ಪ್ರಕಟಿಸಿರುವ ವರದಿಗಳು ಸುಳ್ಳು ಮತ್ತು ಆಧಾರರಹಿತ. ವಾಸ್ತವವೆಂದರೆ, ಸಿಪಿಐ(ಎಂ) ತಾತ್ವಿಕವಾಗಿ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಚುನಾವಣಾ ಬಾಂಡ್‌ ಮೂಲಕ ಹಣ ಪಡೆಯಲು ಅಗತ್ಯವಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯನ್ನೇ ಪಕ್ಷ ತೆರೆಯಲಿಲ್ಲ” ಎಂದು ಹೇಳಿದೆ.

“ಗಮನಿಸಬೇಕಾದ ವಿಚಾರವೆಂದರೆ, ಚುನಾವಣಾ ಬಾಂಡ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಸಿಪಿಐ(ಎಂ) ಯೋಜನೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಚುನಾವಣಾ ಬಾಂಡ್ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ಮಾಡಿದೆ” ಎಂದು ವಿವರಿಸಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಸುಪ್ರೀಂ ಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ. ಕೇಂದ್ರದ ಚುನಾವಣಾ ಬಾಂಡ್‌ಗಳ ಬೇನಾಮಿ ರಾಜಕೀಯ ನಿಧಿ ಯೋಜನೆಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ ‘ಅಸಂವಿಧಾನಿಕ‘ ಎಂದು ಕೋರ್ಟ್‌ ಹೇಳಿದೆ. 2024ರ ಮಾರ್ಚ್ 13 ರೊಳಗೆ ಬಾಂಡ್‌ನ ದಾನಿಗಳು, ಮೊತ್ತ ಮತ್ತು ಅವುಗಳನ್ನು ಸ್ವೀಕರಿಸಿದವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಎಸ್‌ಬಿಐ ಮತ್ತು ಚುಣಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

2018ರ ಜನವರಿಯಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿ, ಜಾರಿಗೆ ತಂದಿತ್ತು. ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಚುನಾವಣಾ ಬಾಂಡ್‌ಗಳನ್ನು ಬ್ಯಾಂಕ್‌ನಿಂದ ಖರೀದಿಸಬಹುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಬಹುದು. ಇವುಗಳ ಮಾಹಿತಿಯು ಗೌಪ್ಯವಾಗಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...