ಮುಂಬೈ ಹೈಕೋರ್ಟ್‌ನ ಸಂವಿಧಾನ ವಿರೋಧಿ ಟಿಪ್ಪಣಿಗಳು: ಸಿಪಿಐಎಂ ಪೊಲಿಟ್‍ಬ್ಯುರೊ ಖಂಡನೆ

Date:

Advertisements

ಗಾಝಾದಲ್ಲಿ ನಡೆಯುತ್ತಿರುವ ನರಹತ್ಯಾಕಾಂಡದ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡಲು ಮುಂಬೈ ಪೊಲೀಸ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್‌ನಲ್ಲಿ ಹಾಕಿದ್ದ ಅರ್ಜಿಯನ್ನು ತಿರಸ್ಕರಿಸುತ್ತ ಪೀಠವು ಮಾಡಿರುವ ಸಂವಿಧಾನ-ವಿರೋಧಿ ಟಿಪ್ಪಣಿಗಳನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ಖಂಡಿಸಿದೆ.

ಅರ್ಜಿಯನ್ನು ತಿರಸ್ಕರಿಸಿದ ಪೀಠ ಬಾಂಬೆ ಹೈಕೋರ್ಟ್, “ನಮ್ಮ ದೇಶದಲ್ಲೇ ಸಾಕಷ್ಟು ಸಮಸ್ಯೆಗಳಿವೆ. ನೀವು ‘ದೂರದೃಷ್ಟಿ ಇಲ್ಲದವರು’ ಎಂದು ಹೇಳಲು ವಿಷಾದಿಸುತ್ತೇವೆ. ನಿಮ್ಮ ದೇಶವನ್ನೇ ಒಮ್ಮೆ ನೋಡಿ. ದೇಶಪ್ರೇಮಿಗಳಾಗಿ. ಇದು ದೇಶಪ್ರೇಮವಲ್ಲ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಪ್ಯಾಲೆಸ್ತೀನ್ ಪರ ಪ್ರತಿಭಟನೆ; ಪ್ರತಿಭಟನಾಕಾರರ ಬಂಧನ

ಇದನ್ನು ಖಂಡಿಸಿರುವ ಸಿಪಿಐಎಂ, “ಸಿಪಿಐಎಂ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸುತ್ತ ನ್ಯಾಯಾಲಯ ನಮ್ಮ ದೇಶಪ್ರೇಮವನ್ನು ಪ್ರಶ್ನಿಸುವ ಮಟ್ಟದವರೆಗೆ ಹೋಗಿದೆ. ವ್ಯಂಗ್ಯವೆಂದರೆ, ಈ ಪೀಠಕ್ಕೆ ಒಂದು ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಷ್ಠಾಪಿಸಿರುವ ಸಂವಿಧಾನದ ನಿಬಂಧನೆಗಳ ಬಗೆಗಾಗಲೀ, ಅಥವಾ ನಮ್ಮ ದೇಶದ ಚರಿತ್ರೆಯ ಬಗೆಗಾಗಲೀ ಮತ್ತು ಪ್ಯಾಲೆಸ್ತೇನಿಯನ್ನರೊಂದಿಗೆ ಮತ್ತು ಅವರ ನ್ಯಾಯಬದ್ಧ ತಾಯ್ನಾಡಿನ ಹಕ್ಕಿನೊಂದಿಗೆ ನಮ್ಮ ಜನತೆಯ ಸೌಹಾರ್ದದ ಬಗೆಗಾಗಲೀ ಅರಿವೇ ಇಲ್ಲದಿರುವಂತೆ ಕಾಣುತ್ತದೆ. ಪೀಠದ ಟಿಪ್ಪಣಿಗಳಲ್ಲಿ ಕೇಂದ್ರ ಸರ್ಕಾರದ ನಿಲುವಿನಲ್ಲಿನ ವಿಭಿನ್ನ ರಾಜಕೀಯ ಪಕ್ಷಪಾತದ ವಾಸನೆ ಸೂಸುತ್ತಿವೆ” ಎಂದು ಖೇದ ವ್ಯಕ್ತಪಡಿಸಿದೆ.

“ಇದು ಎಂತಹ ಧೂಳು ಎಬ್ಬಿಸಬಹುದು ಎಂದು ನಿಮಗೆ ತಿಳಿದಿಲ್ಲ- ಪ್ಯಾಲೆಸ್ತೀನ್‍ ಅಥವಾ ಇಸ್ರೇಲ್ ಪಕ್ಷ ವಹಿಸುವುದು. ನೀವು ಯಾಕೆ ಹೀಗೆ ಮಾಡಬಯಸುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳಿಗೆ ಏನು ಮಾಡಬಹುದು ಎಂದು ನಿಮಗೆ ತಿಳಿದಿಲ್ಲ ಎಂದು ಕಾಣುತ್ತದೆ” ಎಂದು ಪೀಠ ಹೇಳಿತು.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ಕಸ ರಾಶಿ ಹಾಕುವುದು, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದ ಹೊರಗೆ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂದು ಟಿಪ್ಪಣಿ ಮಾಡಿತು.

ಇದನ್ನು ಓದಿದ್ದೀರಾ? ಮಂಗಳೂರು | ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ ಪೊಲೀಸರು!

“ಈ ಟಿಪ್ಪಣಿಗಳು ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ಧೋರಣೆ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ” ಎಂದು ಸಿಪಿಐಎಂ ಪೊಲಿಟ್‍ಬ್ಯುರೊ ಹೇಳಿದೆ.

“ಅಲ್ಲದೆ, ಈ ಪೀಠ ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತಗೊಂಡಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಟ್ಟಬಯಲಿಗೆ ತಂದಿದೆ” ಎಂದಿದೆ.

ಹಾಗೆಯೇ “ಇಂತಹ ದೂಷಣೀಯ ನಿಲುವನ್ನು ಖಡ ಖಂಡಿತವಾಗಿ ತಿರಸ್ಕರಿಸುವಲ್ಲಿ ನಮ್ಮ ಜತೆಗೂಡಿ” ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ದೇಶದ ಸ್ವಾತಂತ್ರ್ಯ ಪ್ರಿಯ ಮತ್ತು ಪ್ರಜಾಪ್ರಭುತ್ವಪ್ರಿಯ ಜನಗಳಿಗೆ ಮನವಿ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾರ್ಖಂಡ್‌ | ಆ್ಯಂಬುಲೆನ್ಸ್‌ ಸಿಗದೆ ಅನಾರೋಗ್ಯ ಪೀಡಿತ ಪತ್ನಿಯನ್ನು ಹೊತ್ತುಕೊಂಡು ನಡೆದ ವ್ಯಕ್ತಿ

ಅಗತ್ಯದ ಸಮಯದಲ್ಲಿ ಆಸ್ಪತ್ರೆಯವರು ಆ್ಯಂಬುಲೆನ್ಸ್‌ ಒದಗಿಸದ ಕಾರಣ, ವ್ಯಕ್ತಿಯೊಬ್ಬರು ತನ್ನ ಅನಾರೋಗ್ಯ...

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

Download Eedina App Android / iOS

X