ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

Date:

Advertisements

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.

ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ಕ್ರಿಕೆಟ್ ಪ್ರಿಯರಿಗಾಗಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿರುವುದಾಗಿ ಆದೇಶ ಹೊರಡಿಸಿದೆ.

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು‌ ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.

Advertisements

‘2023ನೇ ಸಾಲಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ನಮ್ಮ ದೇಶದಲ್ಲಿ ಆಯೋಜಿಸುತ್ತಿದ್ದು, ಇದರಲ್ಲಿ ನಮ್ಮ ಭಾರತ ತಂಡವು ವಿಶ್ವಕಪ್ ಪಂದ್ಯಾವಳಿಯ ಫೈನಲ್‌ಗೆ ತಲುಪಿರುವುದು ಸಂತೋಷದ ವಿಷಯ. ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೊಡ್ಡ ಸ್ಕ್ರೀನ್‌ಗಳನ್ನು ಅಳವಡಿಸಿ, ಫೈನಲ್ ಪಂದ್ಯಾವಳಿಯನ್ನು ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ MC&A ಇವರ ಸಹಯೋಗದೊಂದಿಗೆ ನೇರ ಪ್ರಸಾರ ಮಾಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಮಧ್ಯಾಹ್ನ 1.30ರಿಂದ ಮುಕ್ತಾಯವಾಗುವವರೆಗೆ ದೊಡ್ಡ ಎಲ್.ಇ.ಡಿ ಸ್ಕ್ರೀನ್‌ಗಳನ್ನು ಅಳವಡಿಸಿ, ನೇರ ಪ್ರಸಾರ ಮಾಡಲಾಗುವುದು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಜೊತೆಗೆ ಈ ಸಂದರ್ಭದಲ್ಲಿ ಸೂಕ್ತವಾದ ಭದ್ರತೆಯನ್ನು ಕೂಡ ಕಲ್ಪಿಸಲು ಸೂಚಿಸಿದೆ.

‘ಟೀಮ್ ಇಂಡಿಯಾ ಗೆಲ್ಲಲಿ’ ಎಂದು ಶುಭ ಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X