ವಸುಂಧರಾ ರಾಜೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಗೆಹ್ಲೋಟ್ ವಿರುದ್ಧ ಸಿಡಿದೆದ್ದ ಪೈಲಟ್‌

Date:

Advertisements
  • ಏಪ್ರಿಲ್‌ 11ರಂದು ಪ್ರತಿಭಟನೆ ಘೋಷಿಸಿದ್ದ ಸಚಿನ್‌ ಪೈಲಟ್‌
  • ಪ್ರತಿಭಟನೆಗೆ ಸೂಕ್ತ ಸಮಯವಲ್ಲ ಎಂದ ಕಾಂಗ್ರೆಸ್‌ ನಾಯಕತ್ವ

ಆರು ತಿಂಗಳ ಕಾಲ ತಣ್ಣಗಿದ್ದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ, ಭಾನುವಾರ (ಏಪ್ರಿಲ್‌ 9) ಹಿರಿಯ ನಾಯಕ ಸಚಿನ್ ಪೈಲಟ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೇಲೆ ಹಿಂದಿನ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ಮಾಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಂತರ ಘರ್ಷಣೆ ಭುಗಿಲೆದ್ದಿದೆ.

ಅಶೋಕ್ ಗೆಹ್ಲೋಟ್ ಸರ್ಕಾರ ಹಿಂದಿನ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಮಂಗಳವಾರ (ಏಪ್ರಿಲ್‌ 11) ದಿನವಿಡೀ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಕೇಂದ್ರದ ಕಾಂಗ್ರೆಸ್‌ ನಾಯಕತ್ವ ಸಚಿನ್ ಪೈಲಟ್ ಧರಣಿ ಕೂರಲು ಆರಿಸಿಕೊಂಡ ಸಮಯ ಸೂಕ್ತವಲ್ಲ ಎಂದು ಹೇಳಿದೆ. ಜೊತೆಗೆ, ಸಚಿನ್ ಪೈಲಟ್ ಮುಂದಿಟ್ಟಿರುವ ಆರೋಪಗಳ ಬಗ್ಗೆ ಗಮನಹರಿಸುವುದಾಗಿಯೂ ಕಾಂಗ್ರೆಸ್ ಹೇಳಿದೆ.

ಈ ಹಿಂದಿನ ಬಿಜೆಪಿಯ ವಸುಂಧರ ರಾಜೆ ಅವರ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಗೆಹ್ಲೋಟ್‌ ಮೌನವಾಗಿದ್ದಾರೆ. ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಪೈಲಟ್‌ ಹೇಳಿದ್ದಾರೆ.

Advertisements

ಪೈಲಟ್‌ ಅವರ ಪ್ರತಿಭಟನೆಗೆ ಇದು ಸೂಕ್ತ ಸಮಯವಲ್ಲ. ಈ ವಿಚಾರವಾಗಿ ಅಶೋಕ್‌ ಗೆಹ್ಲೋಟ್ ಹಾಗೂ ಪೈಲಟ್‌ ಜತೆ ಮಾತುಕತೆ ನಡೆಸುವುದಾಗಿ ಕಾಂಗ್ರೆಸ್‌ ಹೇಳಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್, ಪಕ್ಷದ ನಾಯಕ ರಾಹುಲ್‌ ಗಾಂಧಿ ಅನರ್ಹತೆ ಮತ್ತು ಗೌತಮ್‌ ಅದಾನಿ ಹಗರಣದ ಕುರಿತು ತಿಕ್ಕಾಟದಲ್ಲಿ ತೊಡಗಿರುವಾಗ ರಾಜಸ್ಥಾನದಲ್ಲಿ ಆಂತರಿಕ ಬಿಕ್ಕಟ್ಟು ತಲೆದೋರುವುದು ಕಾಂಗ್ರೆಸ್‌ಗೆ ಬೇಡವಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಸಚಿನ್‌ ಪೈಲಟ್‌ ಅವರ ಹೊಸ ಬೇಡಿಕೆ ಕಾಂಗ್ರೆಸ್‌ ನಾಯಕತ್ವದ ಚಿಂತೆಗೆ ಕಾರಣವಾಗಿದೆ.

ಅಲ್ಲದೆ ಕಾಂಗ್ರೆಸ್‌ ನಾಯಕತ್ವದ ಗಮನ ಈಗ ಅನೇಕ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ನೆಟ್ಟಿದೆ. ಈಗ ಕರ್ನಾಟಕದಲ್ಲಿ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗೂಡಿಸುವಿಕೆಯ ತಂತ್ರ ಹೆಣೆಯುವಲ್ಲಿ ಸಕ್ರಿಯವಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿಯವರ ‘ಅರಣ್ಯಾಸಕ್ತಿ’; ಅರಣ್ಯ ಸಂರಕ್ಷಣಾ ಕಾಯ್ದೆಯ ತಿದ್ದುಪಡಿ ಮಸೂದೆ ಹೇಳುವುದೇನು?

“ಸಚಿನ್ ಪೈಲಟ್ ಅವರನ್ನು ಹತ್ತಾರು ಸಲ ಭೇಟಿಯಾದರೂ ಈ ಬಗ್ಗೆ ಅವರು ನನ್ನೊಂದಿಗೆ ಚರ್ಚಿಸಿಲ್ಲ. ಸೋಮವಾರ ಅಥವಾ ಮಂಗಳವಾರ ಜೈಪುರಕ್ಕೆ ತೆರಳಿ ಅಶೋಕ್‌ ಗೆಹ್ಲೋಟ್‌ ಅವರೊಂದಿಗೆ ಮಾತುಕತೆ ನಡೆಸಲಾಗುವುದು” ಎಂದು ರಾಜಸ್ಥಾನ ಕಾಂಗ್ರೆಸ್‌ನ ಉಸ್ತುವಾರಿ ಸುಖ್‌ಜಿಂದರ್‌ ಸಿಂಗ್‌ ರಾಂಧವ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ನಾನು ರಾಜಸ್ತಾನದ ಉಸ್ತುವಾರಿ ಆದ ನಂತರ 10-15 ಬಾರಿ ಪೈಲಟ್‌ ಅವರನ್ನು ಭೇಟಿಯಾಗಿದ್ದೇನೆ. ಆದರೆ ಅವರು ಎಂದೂ ತಮ್ಮ ಅಸಮಾಧಾನದ ಬಗ್ಗೆ ಹೇಳಿಕೊಂಡಿಲ್ಲ” ಎಂದು ಸುಖಜಿಂದರ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X