ಅವಾಚ್ಯ ಪದ ಬಳಸಿದ್ದರಿಂದಲೇ ಸಿ ಟಿ ರವಿ ಅರೆಸ್ಟ್: ಸಿಎಂ ಸಿದ್ದರಾಮಯ್ಯ

Date:

Advertisements

ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಸುಖಾಸುಮ್ಮನೇ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ ಟಿ ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿ ಟಿ ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ” ಎಂದರು.

“ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ” ಎಂದು ಹೇಳಿದರು.

Advertisements

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿ ಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X