ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ: ದಿನೇಶ್‌ ಗುಂಡೂರಾವ್‌

Date:

Advertisements

ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ. ದಲಿತರು ಸಿಎಂ ಆದರೆ ಎಲ್ಲರೂ ಸಂತೋಷಡುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಹಿಂದೆಯೇ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುತ್ತಿದ್ದರು.‌ ಆದರೆ ಆಗ ನಮಗೆ ಹೆಚ್ಚು ಸ್ಥಾನಗಳು ಸಿಗಲಿಲ್ಲ. ಹಾಗೊಂದು ವೇಳೆ ಸ್ಥಾನಗಳು ಬಂದಿರುತ್ತಿದ್ದರೆ ಹಿಂದೆಯೇ ದಲಿತ ಸಿಎಂ ಆಗುತ್ತಿದ್ದರು. ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಆಗಲು ಅವಕಾಶ ಇದೆ” ಎಂದರು.

“ಹೈಕಮಾಂಡ್ ಸೂಚಿಸಿದರೆ ಸಚಿವರು, ಶಾಸಕರು ಯಾರೇ ಆದರೂ ಸ್ಪರ್ಧಿಸಲು ಸಿದ್ಧವಾಗಿ ಇರಬೇಕಾಗುತ್ತದೆ. ನಮ್ಮ ತಯಾರಿ ನಾವು ಮಾಡುತ್ತಿದ್ದೇವೆ.‌ ಇನ್ನೂ ಎರಡು, ಮೂರು ಹಂತಗಳಲ್ಲಿ ಪಟ್ಟಿ ಪ್ರಕಟವಾಗಲಿದೆʼ ಎಂದು ಹೇಳಿದರು.

Advertisements

“ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳು ಬರಬೇಕು ಎಂಬ ಗುರಿ ಇದೆ. ಜನರ ಜೊತೆ ಯಾರು ಒಳ್ಳೆಯ ಹೆಸರು ತೆಗೆದುಕೊಂಡಿದ್ದಾರೋ ಅವರೇ ಸ್ಪರ್ಧಿಸಬೇಕಾಗುತ್ತದೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಸಿದ್ದ ಆಗಿರಬೇಕಾಗುತ್ತದೆ” ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಡಾ. ಮಂಜುನಾಥ್ ಇಲ್ಲವೇ ಯಾರನ್ನೇ ಕಣಕ್ಕಿಳಿಸಿದರೂ ನಮಗೆ (ಕಾಂಗ್ರೆಸ್) ಭಯ ಇಲ್ಲ. ರಾಜಕೀಯ ಎಂದು ಬಂದಾಗ ಹೋರಾಟ ಇದ್ದಿದ್ದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಲಿ. ನಮಗೆ ಯಾರನ್ನು ನಿಲ್ಲಿಸಿದರೂ ಭಯ ಇಲ್ಲ.‌ ಡಾ. ಮಂಜುನಾಥ್ ಅವರ ಬಗ್ಗೆ ಗೌರವ ಇದೆ.‌ ವೃತ್ತಿಯಲ್ಲಿ ನಮ್ಮ ಸರ್ಕಾರ ಕೂಡ ಅವರಿಗೆ ಸಹಕಾರ ನೀಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಮಂಜುನಾಥ್ ಅವರನ್ನು ವೃತ್ತಿಯಲ್ಲಿ ಮುಂದುವರಿಸಿದ್ದರು. ಈಗಲೂ ಮತ್ತೆ ನಮ್ಮ ಸರ್ಕಾರ ಬಂದ ಮೇಲೆಯೂ ಅವರನ್ನು ಮುಂದುವರೆಸಲಾಗಿತ್ತು. ಅವರಿಗೆ ಎಲ್ಲ ಗೌರವವನ್ನೂ ಕೊಟ್ಟಿದ್ದೇವೆ. ಆದರೆ, ರಾಜಕೀಯ ಎಂದು ಬಂದಾಗ ನೋಡೋಣ” ಎಂದರು.

ಎಚ್‌. ಡಿ. ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್‌, “ಕಲುಷಿತ ವ್ಯವಸ್ಥೆಯಲ್ಲಿ ಮಂಜುನಾಥ್ ರಾಜಕೀಯಕ್ಕೆ ಬರುವುದು ಬೇಡ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಕಲುಷಿತನಾ? ರೇವಣ್ಣ ಕಲುಷಿತನಾ? ಮಂಜುನಾಥ್ ಅವರು ವೃತ್ತಿಯಲ್ಲಿ ಹೆಸರು ಮಾಡಿದ್ದಾರೆ. ರಾಜಕೀಯವಾಗಿ ಹೆಸರು ಕಳೆದುಕೊಳ್ಳೋದು ಬೇಡ ಎಂಬ ಉದ್ದೇಶದಿಂದ ಹೇಳಿರಬಹುದು” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X