ಗದಗ | ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ದಲಿತ ಐಕ್ಯತಾ ಹೋರಾಟ ಸಮಿತಿ

Date:

  • ಸುಳ್ಳು ಹೇಳಿ, ದಲಿತರ ಮತ ಕೇಳುತ್ತಿರುವ ಬಿಜೆಪಿ
  • ಸಂವಿಧಾನ ಗೆಲ್ಲಿಸಿ, ಮನುವಾದ ಸೋಲಿಸುವಂತೆ ಕರೆ

ಮುಂಬರುವ ಚುನಾವಣೆಯಲ್ಲಿ ಸಂವಿಧಾನ ಗೆಲ್ಲಬೇಕು, ಮನುವಾದ ಸೋಲಬೇಕು ಇದಕ್ಕಾಗಿ ‘ದಲಿತ ಐಕ್ಯತಾ ಹೋರಾಟ ಚಾಲನೆ ಸಮಿತಿ’ಯು ಸಂವಿಧಾನ ಪರವಾಗಿ ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದೆ.

- Advertisement -

ಗದಗ ಪಟ್ಟಣದಲ್ಲಿ ದಲಿತ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ಏರ್ಪಡಿಸಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಾಲರಾಜ್ ಅರಬರ್ ಮಾತನಾಡಿ, “ರಾಜ್ಯದಲ್ಲಿ ಬೆಲೆ ಏರಿಕೆ, ಸಂವಿಧಾನ ತಿದ್ದುಪಡಿ ಪ್ರಸ್ತಾಪ, ಖಾಸಗಿಕರಣ, ನಿರುದ್ಯೋಗ ಸಮಸ್ಯೆ, ಕೋಮುಗಲಭೆ, ಗಂಭೀರ ಸಮಸ್ಯೆಗಳ ಬಗ್ಗೆ ನಾವೆಲ್ಲರೂ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿ ಬಂದೊದಗಿದೆ”‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ದಲಿತ ಮುಖಂಡ ರಮೇಶ್ ಬಾಳಮ್ಮ ಮಾತನಾಡಿ, “ಸದಾಶಿವ ಆಯೋಗ ಸಂಪೂರ್ಣ ಜಾರಿಯಾಗದೆ ಇದ್ದರೂ, ಜಾರಿ ಮಾಡಿದ್ದೇವೆಂದು ಬಿಜೆಪಿಯವರು ಸುಳ್ಳ ಅಪಪ್ರಚಾರ ಮಾಡುತ್ತಿದ್ದಾರೆ. ದಲಿತರಿಗೆ ಶೋಷಿತ ಜನಾಂಗದವರಿಗೆ ಮೋಸ ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಸಂಸ ಮುಖಂಡ ವೆಂಕಟೇಶಯ್ಯ ಮಾತನಾಡಿ, “ಬಿಜೆಪಿ ನೇತೃತ್ವದ ಸರ್ಕಾರಗಳು ದಲಿತರ ಅಭಿವೃದ್ದಿ ಮಾಡಿದ್ದೇವೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ದಲಿತರ ಓಟು ಪಡೆಯುವಂತ ಹುನ್ನಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ದಲಿತರು, ಶೋಷಿತರು, ಅಲ್ಪಸಂಖ್ಯಾತರು ಬಿಜೆಪಿಯ ಪಕ್ಷಕ್ಕೆ ಮತ ನೀಡಕೂಡದು. ದಲಿತರಿಗೆ ಅಲ್ಪಸಂಖ್ಯಾತರಿಗೆ ಶೋಷಿತ ಜನಾಂಗದವರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸಂವಿಧಾನ ಪಾಲನೆಗಾಗಿ ಸಂವಿಧಾನ ಉಳಿಸುವುದಕ್ಕಾಗಿ ಸಂವಿಧಾನವನ್ನು ಅಪ್ಪಿಕೊಳ್ಳುವ ಪಕ್ಷ ಕಾಂಗ್ರೆಸ್ ಬೆಂಬಲಿಸೋಣ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ ಎಫ್ ವೈ ದೊಡ್ಮನಿ, ಪ್ರಕಾಶ್ ಕೆಲೂರು, ನಾಗರಾಜ್ ಗೋಕಾವಿ, ಮಾರುತಿ ಅಂಗಡಿ, ಹನುಮಂತ್ ದೊಡ್ಮನಿ, ಬಿಕೆ ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...