ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

Date:

Advertisements

“ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ ನಡೆಸಲಾಗುವುದು” ಎಂದು ದಾವಣಗೆರೆಯಲ್ಲಿ ಮಾದಿಗ ಸಮುದಾಯ ಒಕ್ಕೂಟ ಹಾಗೂ ಎಲ್ಲಾ ದಲಿತ ಸಂಘಟನೆಯ ಮುಖ್ಯಸ್ಥರು ಸಭೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಚರ್ಚೆ ನಡೆಸಿದ ಮುಖಂಡರು “ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು ಮೀಸಲಾತಿಯ ಲಾಭ ಪಡೆಯುವುದರಲ್ಲಿ ಹಿಂದುಳಿದಿದೆ. ಈ ಅನ್ಯಾಯವಾಗುತ್ತಿರುವ ಬಗ್ಗೆ ಕಳೆದ 40 ವರ್ಷಗಳಿಂದ ಹೋರಾಟ ನಡೆಸಿದ್ದರಿಂದ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಿದ ಸರ್ಕಾರಕ್ಕೆ ಮಾದಿಗ ಸಮುದಾಯಕ್ಕೆ ಶೇಕಡಾವಾರು ಹೆಚ್ಚಿನ ಒಳಮೀಸಲಾತಿ ಕೊಡಬೇಕೆಂದು ವರದಿ ಸಲ್ಲಿಸಿದೆ” ಎಂದರು.

1002521731
ಪ್ರವಾಸಿ ಮಂದಿರದಲ್ಲಿ ದಲಿತ ಮುಖಂಡರ ಪೂರ್ವಭಾವಿ ಸಭೆ

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಹಳೆಯ ವರದಿಗಳನ್ನು ಬದಿಗಿಟ್ಟು ನ್ಯಾ. ನಾಗಮೋಹನದಾಸ್ ಅವರ ನೇತೃತ್ವದಲ್ಲಿ ಮತ್ತೊಂದು ಆಯೋಗವನ್ನು ರಚಿಸಿದ್ದು, ನ್ಯಾ. ನಾಗಮೋಹನದಾಸ್ ಆಯೋಗವು ಕೂಡ ಶೇ.6ರಷ್ಟು ಮಾದಿಗ, ಹಾಗೂ ಹೊಲೆಯ ಶೇ.5ರಂತೆ ಮತ್ತು ಇತರರಿಗೆ ಕೆಲವು ಶೇಕಡವಾರು ವಿಂಗಡಿಸಿ ವರದಿ ಕೊಟ್ಟಿದೆ. ಆದರೂ ಅದನ್ನು ಜಾರಿಗೆ ತರಲು ಸರ್ಕಾರ ಮತ್ತೆ ಮತ್ತೆ ಕುಂಟು ನೆಪಗಳನ್ನು ಹೇಳಿ ಕಾಲಹರಣ ಮಾಡುತ್ತಿದೆ. ಸರಕಾರವು ವರದಿಯನ್ನು ಯಥಾವತ್ತಾಗಿ ಯಾರ ಒತ್ತಡಕ್ಕೂ ಮಣಿಯದೇ ಈ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

Advertisements

“ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ, ಒಳಮೀಸಲಾತಿ ವರ್ಗೀಕರಣ ಜಾರಿಗೆ ತರಲು ಒತ್ತಾಯಿಸಿ ಮಾದಿಗ ಸಮುದಾಯ ಒಕ್ಕೂಟ ಹಾಗೂ ಎಲ್ಲಾ ದಲಿತ ಸಂಘಟನೆಗಳ ನೇತೃತ್ವದಲ್ಲಿ 2025, ಆಗಸ್ಟ್ 18ರಂದು ಸೋಮವಾರ ಬೃಹತ್ ಪ್ರತಿಭಟನೆ ಮೂಲಕ ಎ ಸಿ ಕಛೇರಿ ಮತ್ತು ಮಹಾನಗರ ಪಾಲಿಕೆ ಮುತ್ತಿಗೆ ಕಾರ್ಯಕ್ರಮ ಹಾಗೂ ಕಚೇರಿಗೆ ಬೀಗ ಹಾಕುವುದರ ಮೂಲಕ ಹೋರಾಟ ನಡೆಸಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು ಹೋರಾಟದಲ್ಲಿ ದಲಿತ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಗಳ ನೌಕರರು, ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ವಾತಂತ್ರ್ಯೋತ್ಸವ ದಿನ ಒಳಮೀಸಲಾತಿ ವಿಳಂಬ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಆಕ್ರೋಶ; ದಲಿತ ಮುಖಂಡರ ಬಂಧನ

ಸಭೆಯಲ್ಲಿ ದಲಿತ ಸಂಘಟನೆಗಳ ಮುಖಂಡರಾದ ಮಲ್ಲೇಶ್, ಆಲೂರು ನಿಂಗರಾಜು, ನಿ. ಡಿವೈಎಸ್ಪಿ ರವಿನಾರಾಯಣ್, ಮಂಜುನಾಥ್ ಕುಂದುವಾಡ, ಹಾಲೇಶ್, ಗುಡ್ಡಪ್ಪ ಎಚ್ ಸಿ., ಮಲ್ಲಿಕಾರ್ಜುನ್, ಗೋವಿಂದರಾಜು, ನಿರಂಜನ್, ನಿಂಗಪ್ಪ ಚಿಕ್ಕನಹಳ್ಳಿ, ಮಲ್ಲಪ್ಪ, ಸೋಮಲಾಪುರ ಹನುಮಂತಪ್ಪ , ವೀರಭದ್ರಪ್ಪ, ನೀಲಗಿರಿಯಪ್ಪ, ಎಲ್ ಡಿ ಗೋಣೆಪ್ಪ, ಹರಿಹರ ಮಹಾಂತೇಶ್, ಕೃಷ್ಣಪ್ಪ, ರಾಘವೇಂದ್ರ, ಲಿಂಗರಾಜು ಗಾಂಧಿನಗರ, ಮಂಜುನಾಥ್ ಶಾಂತಿನಗರ, ಪ್ರದೀಪ್, ಶಿವಶಂಕರ್ ಸೇರಿದಂತೆ ಮಾದಿಗ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X