ದಾವಣಗೆರೆ | ದಲಿತ ಮಹಿಳೆಗೆ ಅವಮಾನಕರ ಹೇಳಿಕೆ; ಯತ್ನಾಳ್ ಬಂಧನಕ್ಕೆ ದಸಂಸ ಒತ್ತಾಯ

Date:

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ ಸಾಮಾನ್ಯ ದಲಿತ ಹೆಣ್ಣು ಮಕ್ಕಳಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ದಲಿತ ಸಂಘರ್ಷ ಸಮಿತಿ (ಪ್ರೊ| ಬಿ.ಕೃಷ್ಣಪ್ಪ ದಸಂಸ) ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ (ಪ್ರೊ. ಕೃಷ್ಣಪ್ಪ) ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ “ಸಾರ್ವಜನಿಕವಾಗಿ ದಲಿತ ಹೆಣ್ಣು ಮಕ್ಕಳ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡುವ ಮೂಲಕ ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿಯ ಮತ್ತು ಕೋಮು ಸಂಘರ್ಷದ, ಪ್ರಚೋದನಕಾರಿ ಹೇಳಿ ನೀಡಿರುವ ಇವರನ್ನು ವಿಡಿಯೋ ಆಧಾರದ ಮೇಲೆ ಎಸ್ಸಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1002708278

“ದಾವಣಗೆರೆಯ ನಿಷ್ಠಾವಂತ ಅಧಿಕಾರಿ ಎಸ್ಪಿ ಉಮಾ ಪ್ರಶಾಂತ್ ಅವರ ಬಗ್ಗೆ ಶಾಸಕ ಬಿ.ಪಿ ಹರೀಶ್ ಅವರು ನಾಯಿಗೆ ಹೋಲಿಸಿ ಮಾತನಾಡಿ ಅವರಿಗೆ ಅವಮಾನ ಮಾಡಿದ್ದಾರೆ. ಇಂತಹ ಹೇಳಿಕೆ ಕೊಡುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಶಾಸಕ ಬಸವನಗೌಡ ಯತ್ನಾಳ ಅವರು ದಲಿತರ, ಅಲ್ಪಸಂಖ್ಯಾತರ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಯತ್ನಾಳ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿ ನಮ್ಮ ದಲಿತ ಸಮಾಜಕ್ಕೆ ತುಂಬಾ ನೋವಾಗಿರುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆಸ್ಪತ್ರೆ ಸ್ನಾನದ ಕೋಣೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ರಕ್ಷಿಸಿ ಆರೈಕೆ ನೀಡಿದ ಸಿಬ್ಬಂದಿ

ಮಹಿಳಾ ಸಂಚಾಲಕರಾದ ವಿಜಯಮ್ಮ , ಚಿತ್ತಾನಹಳ್ಳಿ ನಾಗರಾಜು, ಬೇತೂರು ಹನುಮಂತ, ಶಂಕರ್ ಗಾಂಧಿನಗರ, ಮಂಜುನಾಥ್, ಮಂಜುನಾಥ್ ವೈ ಕಟ್ಟೂರು, ಶಿವಶಂಕರ ಎಸ್ ಎಮ್ ಗಾಂಧಿನಗರ. ರಾಕೇಶ್, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಖಾಲಿದ್ ಅಲಿ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಜಾತಿ-ಧರ್ಮಗಳಾಚೆಗಿನ ಸ್ನೇಹಕ್ಕೆ ಸಾಕ್ಷಿಯಾದ ಮೈಸೂರು

ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಗಜ ಪಡೆ ಯುವಕರ ಬಳಗದ...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...