ದಾವಣಗೆರೆ | ಅನುದಾನಿತ ಸೇರಿ 18,500 ಶಾಲಾ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

Date:

“ಸರ್ಕಾರಿ ಶಾಲೆಯ 13,500 ಶಿಕ್ಷಕರು, ಅನುದಾನಿತ ಶಾಲೆಯ 5000 ಶಿಕ್ಷಕರು ಸೇರಿ ಒಟ್ಟು 18,500 ಶಿಕ್ಷಕರ ನೇಮಕಾತಿ ನಡೆಯಲಿದೆ. ನೇಮಕಾತಿ ನಂತರ ಶಿಕ್ಷಣ ಇಲಾಖೆಗೆ ಶಕ್ತಿ ಬರಲಿದೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರುವರೆ ವರ್ಷಕ್ಕೆ 3500 ಶಿಕ್ಷಕರ ನೇಮಕಾತಿ ಮಾಡಿದ್ದರು. ಮುಖ್ಯಮಂತ್ರಿಗಳು ಅಪಾರ ಸಹಕಾರ ನೀಡುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಉತ್ತಮ ಕೆಲಸ ಮಾಡಲಿದ್ದೇವೆ” ಎಂದು ದಾವಣಗೆರೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement -

“ನ್ಯಾ.ನಾಗಮೋಹನ್ ದಾಸ್ ಒಳಮೀಸಲಾತಿ ವರದಿ ಬಂದಿದೆ, ಶಿಕ್ಷಕರ ನೇಮಕ ಮಾಡುತ್ತೇವೆ. ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿ ಪ್ರಕ್ರಿಯೆ ಆರಂಭ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1002684373

ದಾವಣಗೆರೆ ನಗರದಲ್ಲಿ ಇಂದು ಬಿಐಇಟಿ ಕಾಲೇಜ್‌ನ ಆವರಣದ ಎಸ್.ಎಸ್.ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್‌ನಲ್ಲಿ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಎರಡನೇ ರಾಜ್ಯ ಮಟ್ಟದ ಪದವಿ ಪೂರ್ವ ಶಿಕ್ಷಣ ಸಮಾವೇಶದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿ, “ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಮತ್ತು ಮೂರು ಬಾರಿ ಪರೀಕ್ಷಾ ನೀತಿ ಜಾರಿಗೊಳಿಸುವ ಮೂಲಕ ಅನುತ್ತೀರ್ಣರಾದ ಮಕ್ಕಳ ಕಲಿಕೆಗೆ ಉತ್ತಮ ಅವಕಾಶ ಕಲ್ಪಿಸಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈ ನೀತಿಯಿಂದಾಗಿ ಪ್ರಸ್ತುತ ವರ್ಷದಲ್ಲಿ ಎಸ್ಎಸ್ಎಲ್ಸಿಯಲ್ಲಿ 1.16 ಲಕ್ಷ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪಿಯುಸಿಯಲ್ಲಿ ಮೂರು ಬಾರಿ ಪರೀಕ್ಷೆಯಲ್ಲಿ 86 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕೆಲವರು ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರಿದ್ದಾರೆ. ಗೌರಿಬಿದನೂರಿನ ಓರ್ವ ವಿದ್ಯಾರ್ಥಿ ಐಐಟಿ ಗೆ ಹೋಗಿರುವುದು ಸಂತೋಷದ ಸಂಗತಿ” ಎಂದು ಹೇಳಿದರು.

1002684374

“800 ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲು 3500 ಕೋಟಿ ಅನುದಾನ ಇಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ 308 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗಿದೆ. ಪಿಯು ಕಾಲೇಜ್‌ಗಳನ್ನು ಆರಂಭಿಸುವ ಯೋಜನೆಯಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿವೆ.‌ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕಟ್ಟಡ, ರಕ್ಷಣೆಯ ವಿಷಯಗಳ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮತ್ತು ಲೋಕೊಪಯೋಗಿ ಸಚಿವ ಜಾರಕಿಹೊಳೆ ಅವರ ಬಳಿ ಹೇಳಿದ್ದೇನೆ. ಈ ಸಮಸ್ಯೆಗೆ ಅವರೇ ನಿರ್ಧಾರ ಕೈಗೊಳ್ಳಬೇಕಿದೆ” ಎಂದು ಅಭಿಪ್ರಾಯಪಟ್ಟರು.

1002684420

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, “ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಘಟನೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದೇವೆ. ಘೋಷಣೆ ಕೂಗಿದ್ದರೆ, ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ. ದೇಶದಲ್ಲಿ ಕಾನೂನು ಗೆದ್ದಾಗ ಮಾತ್ರ ನಾವು – ನೀವು ಸುರಕ್ಷಿತವಾಗಿರುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ, ಬಡ್ತಿಯಲ್ಲಿ ಒಳಮೀಸಲಾತಿ: ಸಚಿವ ಮುನಿಯಪ್ಪ

ಕಾರ್ಯಕ್ರಮದಲ್ಲಿ ಕುಪ್ಮಾ ರಾಜ್ಯಾಧ್ಯಕ್ಷ ಡಾ.ಎಂ. ಮೋಹನ್ ಅಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್, ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್, ಕುಪ್ಮಾ ದಾವಣಗೆರೆ ಜಿಲ್ಲಾಧ್ಯಕ್ಷ ಎಸ್.ಜಿ. ಶ್ರೀಧರ್, ಕಾರ್ಯದರ್ಶಿ ಡಿ.ಎಸ್. ಜಯಂತ್ ಸೇರಿದಂತೆ ಇತರ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...