ದಾವಣಗೆರೆ | ಮುಸ್ಲಿಂ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣ ಶಾಸಕರ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ.

Date:

Advertisements

ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎನ್ನುವ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ಖಂಡಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಟಿ ಐ) ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ದಾವಣಗೆರೆ ನಗರದ ಎಸ್ ಡಿ ಪಿ ಐ ಜಿಲ್ಲಾ ಕಚೇರಿಯಿಂದ ಮದೀನಾ ಆಟೋ ಸ್ಟ್ಯಾಂಡ್ ಅಹಮದ್ ನಗರದವರೆಗೆ ಪ್ರತಿಭಟನಾ ರ್ಯಾಲಿಯನ್ನು ನೆಡೆಸಲಾಯಿತು.

ಪ್ರತಿಭಟನಾ ಉದ್ದೇಶಿಸಿ SDPI ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಜ್ ಅಹಮದ್ ಮಾತನಾಡಿದ, “ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿಂದೆ ಭಟ್ಕಳದ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯ ಗೋಸಾಗಟ ಮಾಡುವ ಮುಸ್ಲಿಮರಿಗೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹೊಡೆಯಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿ. ತನ್ನೊಳಗಿನ ಮುಸ್ಲಿಂ ದ್ವೇಷ ಹೊರ ಹಾಕಿದ್ದರು, ಮುಸ್ಲಿಮರ ಮತ ಪಡೆದು ಆಯ್ಕೆಯಾದ ರಾಜ್ಯದ ಕಾಂಗ್ರೆಸ್ ನಾಯಕರ ಮುಸ್ಲಿಂ ದ್ವೇಷವು ಸಂಘ ಪರಿವಾರದ ನಾಯಕರ ಮುಸ್ಲಿಂ ದ್ವೇಷವನ್ನು ಓವರ್ ಟೇಕ್ ಮಾಡಲು ಪೈಪೋಟಿ ನಡೆಸಿದಂತಿದೆ. ಆದ್ದರಿಂದ ಈ ಆರೆಸ್ಸೆಸ್ ಮನಸ್ಥಿತಿಯ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

1002213885
ಶಾಸಕರ ಹೇಳಿಕೆ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮುಖಂಡರು ಪ್ರತಿಭಟನೆ ನಡೆಸಿದರು

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಎ ಆರ್ ತಾಹೀರ್ ಮಾತನಾಡಿ “ಕೆಲವು ಕಾಂಗ್ರೆಸ್ ಶಾಸಕರ ಮನಸ್ಥಿತಿಯು ನಿಜಕ್ಕೂ ಎಚ್ಚರಿಕೆಯ ಮತ್ತು ಚಿಂತಿಸಬೇಕಾದ ವಿಷಯವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್‌ನ ಹಲವು ನಾಯಕರು ತಮ್ಮ ಮೂಲ ಸಂಘ ಪರಿವಾರದ ಸಂಸ್ಕೃತಿಯನ್ನು ತೋರಿಸುತ್ತಲೇ ಇದ್ದಾರೆ. ಇದೀಗ ಅವರ ನುಡಿಗಳೇ ಆ ನಿಜವನ್ನು ಬಹಿರಂಗಗೊಳಿಸುತ್ತಿವೆ. ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ, ತಮ್ಮ ಕ್ಷೇತ್ರದ ಮುಸ್ಲಿಂ ರೈತರು ಬಗರ್ ಹುಕುಂ ಭೂಮಿಗಾಗಿ ಸಲ್ಲಿಸಿರುವ ಅರ್ಜಿಗೆ ಸ್ಪಂದಿಸಿದ ಅಧಿಕಾರಿಗಳ ವಿರುದ್ಧ, “ಅವರನ್ನು ನೇಣಿಗೆ ಏರಿಸುತ್ತೀನಿ” ಎಂಬ ಕ್ರೂರ, ಅಸಹಿಷ್ಣು ಮತ್ತು ಬೆದರಿಕೆಯ ಮಾತುಗಳನ್ನು ಹೊರಹಾಕಿದ್ದಾರೆ. ಇದು ಕೇವಲ ಮುಸ್ಲಿಂ ದ್ವೇಶವಲ್ಲ. ಇದು ಸಂವಿಧಾನ ವಿರುದ್ಧದ ಅಭಿಪ್ರಾಯ, ಅಧಿಕಾರ ದುರ್ಬಳಕೆ ಮತ್ತು ಧರ್ಮದ ಆಧಾರದ ಮೇಲೆ ದ್ವೇಷ ಹರಡುವ ಅಪರಾಧ. ಇದು ಭಯೋತ್ಪಾದಕ ರಾಜಕೀಯ ಸಂಸ್ಕೃತಿಗೆ ದಾರಿ ಮಾಡಿಕೊಡುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌಸ್ ಪೀರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಎಜಾಜ್ ಅಹಮದ್, ಸಹ ಕಾರ್ಯದರ್ಶಿ ಮೊಹಮ್ಮದ್ ಕುಬೈಬ್, ಹಾಗೂ ಸಮಿತಿ ಸದಸ್ಯರಾದ, ಆರೀಫ್, ಆದಿಲ್, ಅಮೀರ್ ಮತ್ತು ಬ್ರಾಂಚ್ ಸಮಿತಿಗಳ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X