ದಾವಣಗೆರೆ | ಬಿಜೆಪಿಗೆ ಸಪೋರ್ಟ್‌ ಮಾಡಲು ವಿನಯ್ ಸ್ಪರ್ಧೆ, ನೀವೆಲ್ಲರೂ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯ ಕರೆ

Date:

Advertisements

ನನಗೆ ಮೋಸ ಮಾಡಿ ಹೋಗಿದ್ದ ಬೈರತಿ ಬಸವರಾಜು ದಾವಣಗೆರೆಯಲ್ಲಿ ಬಿಜೆಪಿಗೆ ಲಾಭ ಆಗಲಿ ಎಂದು ವಿನಯ್‌ ಕುಮಾರ್‌ಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ದಾವಣಗೆರೆಯಲ್ಲಿ ನಡೆದ ಕುರುಬ ಸಮುದಾಯದ ಮತ್ತು ಹಿಂದುಳಿದ ಸಮಾಜಗಳ ಸಭೆಯಲ್ಲಿ ಅವರು ಮಾತನಾಡಿ, “ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಇದಕ್ಕೆ ಕೆ.ಎಸ್.ಈಶ್ವರಪ್ಪ ಕೂಡ ಸ್ಪಷ್ಟ ಉದಾಹರಣೆ. ನನ್ನ ವಿರುದ್ಧ ರಕ್ತ ಕಾರುತ್ತಿದ್ದ ಈಶ್ವರಪ್ಪ ಅವರ ಮಗನಿಗೂ ಬಿಜೆಪಿ ಟಿಕೆಟ್ ಕೊಡಲಿಲ್ಲ. ಇದೇ ಬಿಜೆಪಿಯ ಜಾಯಮಾನ” ಎಂದರು.

“ನಿಮಗೆ ನಾನು ಬೇಕೋ-ವಿನಯ್ ಬೇಕೋ ತೀರ್ಮಾನ ಮಾಡಿ. ನಾನು ಬೇಕು ಅಂದ್ರೆ ವಿನಯ್‌ಗೆ ಒಂದೂ ಓಟು ಹಾಕಬೇಡಿ. ಬಿಜೆಪಿ ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ. ಇಂಥಾ ಬಿಜೆಪಿಗೆ ವಿನಯ್ ಸಪೋರ್ಟ್ ಆಗುವಂತೆ ಮಾಡಿದ್ದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ. ಇಲ್ಲಿ ನಾನೇ ಅಭ್ಯರ್ಥಿ. ಕಾಂಗ್ರೆಸ್ ಗೆ ಹಾಕುವ ಒಂದೊಂದು ಮತಗಳೂ ನನಗೇ ಹಾಕಿದಂತೆ. ವಿಯನ್ ಗೆ ಹಾಕುವ ಒಂದೊಂದು ಮತವೂ ನನ್ನ ವಿರುದ್ಧ ಹಾಕಿದಂತೆ” ಎಂದು ಸೂಚಿಸಿದರು.

“ಮೋದಿ ಸುಳ್ಳನ್ನೇ ಮಾರುಕಟ್ಟೆ ಮಾಡಿ ಜಾತಿ-ಧರ್ಮದ ಹೆಸರಲ್ಲಿ ಸಮಾಜ ಒಡೆದದ್ದೇ ಸಾಧನೆ. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನನಗೆ ತೊಡೆ ತಟ್ಟಿದ್ದರು. ಪಾದಯಾತ್ರೆ ಮಾಡಿ ಸೊಕ್ಕು ಮುರಿದೆ. ಹಿಂದುಳಿದವರ ಶತ್ರು ಬಿಜೆಪಿಗೆ ಮತ ಹಾಕೋದಕ್ಕೆ ಕಾರಣವೇ ಇಲ್ಲ. ಬಿಜೆಪಿ ಕುರುಬರಿಗೆ ಒಂದೂ ಸೀಟು ಕೊಟ್ಟಿಲ್ಲ. ನೀವೂ ಬಿಜೆಪಿಗೆ ಒಂದು ಓಟೂ ಕೊಡಬೇಡಿ” ಎಂದರು.

“ಹಿಂದುಳಿದವರಿಗೆ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಬಿಜೆಪಿಯ ರಾಮಾ ಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಹೀಗಾಗಿ ಬಿಜೆಪಿ ಪಕ್ಕಾ ಹಿಂದುಳಿದವರ, ಶ್ರಮಿಕರ, ದುಡಿಯುವ ವರ್ಗಗಳ ವಿರೋಧಿ. ಸುಳ್ಳನ್ನು ಮಾರ್ಕೆಟ್ ಮಾಡಿ ಮೋದಿ ಭಾರತೀಯರಿಗೆ ಮಾಡಿದ ಮೋಸಕ್ಕೆ, ನಂಬಿಕೆ ದ್ರೋಹಕ್ಕೆ ಪಾಠ ಕಲಿಸಿ” ಎಂಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X