ಪಿಎಫ್‌ಐ ಪ್ರಕರಣ | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನದ ಬೆನ್ನಲ್ಲೇ ಹಲವೆಡೆ ಇಡಿ ದಾಳಿ

Date:

Advertisements

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನಿಷೇಧಿತ ಪಿಎಫ್‌ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳಿಗೆ ದಾಳಿ ನಡೆಸಿದೆ.

ಇತ್ತೀಚಿಗಷ್ಟೇ ಇಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿ ಅವರನ್ನು ಬಂಧಿಸಿದ್ದರು. ಇದೀಗ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.

ಇದನ್ನು ಓದಿದ್ದೀರಾ? ಮೂವರು ಪಿಎಫ್‌ಐ ಸದಸ್ಯರಿಗೆ ಜಾಮೀನು; ಇಡಿ ‘ಕುದುರೆಯ ಮುಂದೆ ಬಂಡಿ ಇರಿಸಿದೆ’ ಎಂದ ದೆಹಲಿ ಹೈಕೋರ್ಟ್

Advertisements

ಎಸ್‌ಡಿಪಿಐ ದೆಹಲಿಯ ಎರಡು ಕಚೇರಿಗಳಲ್ಲಿ, ಕೇರಳದ ತಿರುವನಂತಪುರ, ಮಲಪ್ಪುರಂನಲ್ಲಿ, ಆಂಧ್ರಪ್ರದೇಶದ ನಡ್ಯಾಲ್, ಜಾರ್ಖಂಡ್‌ನ ಪಾಕೂರ್, ಮಹಾರಾಷ್ಟ್ರದ ಥಾಣೆ, ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಆರೋಪದಲ್ಲಿ 2022ರ ಸೆಪ್ಟೆಂಬರ್‌ನಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ಕೇಂದ್ರ ಸರ್ಕಾರವು ಇದು ಕಾನೂನುಬಾಹಿರ ಸಂಘಟನೆ ಎಂದು ಕರೆದಿದೆ. ಹಾಗೆಯೇ ಪಿಎಫ್‌ಐ ತನ್ನ ಕ್ರಿಮಿನಲ್ ಕಾರ್ಯಗಳನ್ನು ಎಸ್‌ಡಿಪಿಐ ಸಹಾಯದಿಂದ ಮಾಡುತ್ತಿತ್ತು, ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ನಂಟಿದೆ ಎಂದು ಇಡಿ ಆರೋಪಿಸಿದೆ.

2009ರಲ್ಲಿ ಎಸ್‌ಡಿಪಿಐ ಸ್ಥಾಪಿಸಲಾಗಿದ್ದು, ಅದರ ಮುಖ್ಯ ಕಚೇರಿ ದೆಹಲಿಯಲ್ಲಿದೆ. ಇದು ಪಿಎಫ್‌ಐನ ರಾಜಕೀಯ ಪಕ್ಷ ಎಂಬ ಆರೋಪ ಮಾಡಲಾಗಿದೆ. ಪಿಎಫ್‌ಐ ಸಂಘಟನೆ ನಿಷೇಧದ ಬೆನ್ನಲ್ಲೇ ಎಸ್‌ಡಿಪಿಐ ಮೇಲೆಯೂ ಮನಿ ಲಾಂಡರಿಂಗ್ ಆರೋಪಗಳು ಕೇಳಿಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X